ಬ್ರೇಕಿಂಗ್ ನ್ಯೂಸ್
06-06-22 08:58 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಆಕ್ಮೆ ಕ್ಲೀನ್ ಟೆಕ್ ಸೊಲ್ಯುಷನ್ಸ್ ಕಂಪೆನಿಯು ಮಂಗಳೂರಿನಲ್ಲಿ ಹೈಡ್ರೊಜನ್ ಮತ್ತು ಅಮೋನಿಯಾ ಘಟಕ ಸ್ಥಾಪನೆ ಹಾಗೂ ಸೋಲಾರ್ ಘಟಕ ಸ್ಥಾಪನೆಗಾಗಿ 52 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದ್ದು ರಾಜ್ಯ ಸರ್ಕಾರ ಈ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಆಕ್ಮೆ ಗ್ರೂಪ್ ಕಂಪೆನಿಯ ಸಿಓಓ ಸಂದೀಪ್ ಕಶ್ಯಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಮಾಡಿದರು. ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ನವೀಕರಿಸಬಲ್ಲ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ, ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ ಅಗತ್ಯ ಬೆಂಬಲ ನೀಡಲಿದೆ. ನೀವು ಸಹ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದು ಮುಖ್ಯಮಂತ್ರಿಗಳು ಕಂಪನಿಗೆ ಸಲಹೆ ನೀಡಿದರು.
![]()
ಆಕ್ಮೆ ಗ್ರೂಪ್ ಜಾಗತಿಕ ಮಟ್ಟದಲ್ಲಿ ಹೈಡ್ರೋಜನ್ –ಅಮೋನಿಯಂ ಘಟಕಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ರಾಜಸ್ಥಾನದ ಬಿಕಾನೇರ್ ನಲ್ಲಿ ವಿಶ್ವದ ಮೊದಲ ಹೈಡ್ರೋಜನ್ - ಅಮೋನಿಯಂ ಮತ್ತು ಸೋಲಾರ್ ಘಟಕವನ್ನು ಸ್ಥಾಪಿಸಿದ್ದು, ಕಾರ್ಯಾರಂಭ ಮಾಡಿದೆ ಎಂದು ಆಕ್ಮೆ ಗ್ರೂಪ್ ನ ಉಪಾಧ್ಯಕ್ಷ ಶಶಿ ಶೇಖರ್ ತಿಳಿಸಿದ್ದಾರೆ.

ಇತ್ತೀಚೆಗೆ ಸ್ವಿಟ್ಸರ್ಲೆಂಡಿನ ದಾವೊಸ್ ನಲ್ಲಿ ರೆನ್ಯೂ ಪವರ್ ಕಂಪೆನಿಯವರು ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ ಮಾಡಿಕೊಂಡಿತ್ತು. ಆಕ್ಮೆ ಜೊತೆಗಿನ ಒಪ್ಪಂದ ಏರ್ಪಟ್ಟ ವೇಳೆ, ಇಂಧನ ಸಚಿವ ವಿ. ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಆಕ್ಮೆ ಗ್ರೂಪ್ ಅಧಿಕಾರಿಗಳಾದ ಎಂ.ವಿ.ವಿ.ಎಸ್ ರೆಡ್ಡಿ, ಅರುಣ್ ಚೋಪ್ರಾ ಮತ್ತಿತರರು ಉಪಸ್ಥಿತರಿದ್ದರು.
Gurugram-based renewable energy company ACME Cleantech Solutions on Monday signed up with Karnataka proposing to invest about Rs 52,000 crore in a 1.2 million tonnes per annum (MTPA) green hydrogen and ammonia plant, along with an associated solar power unit in Mangaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm