ಬ್ರೇಕಿಂಗ್ ನ್ಯೂಸ್
06-06-22 08:58 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಆಕ್ಮೆ ಕ್ಲೀನ್ ಟೆಕ್ ಸೊಲ್ಯುಷನ್ಸ್ ಕಂಪೆನಿಯು ಮಂಗಳೂರಿನಲ್ಲಿ ಹೈಡ್ರೊಜನ್ ಮತ್ತು ಅಮೋನಿಯಾ ಘಟಕ ಸ್ಥಾಪನೆ ಹಾಗೂ ಸೋಲಾರ್ ಘಟಕ ಸ್ಥಾಪನೆಗಾಗಿ 52 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದ್ದು ರಾಜ್ಯ ಸರ್ಕಾರ ಈ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಆಕ್ಮೆ ಗ್ರೂಪ್ ಕಂಪೆನಿಯ ಸಿಓಓ ಸಂದೀಪ್ ಕಶ್ಯಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಮಾಡಿದರು. ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ನವೀಕರಿಸಬಲ್ಲ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ, ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ ಅಗತ್ಯ ಬೆಂಬಲ ನೀಡಲಿದೆ. ನೀವು ಸಹ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದು ಮುಖ್ಯಮಂತ್ರಿಗಳು ಕಂಪನಿಗೆ ಸಲಹೆ ನೀಡಿದರು.
![]()
ಆಕ್ಮೆ ಗ್ರೂಪ್ ಜಾಗತಿಕ ಮಟ್ಟದಲ್ಲಿ ಹೈಡ್ರೋಜನ್ –ಅಮೋನಿಯಂ ಘಟಕಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ರಾಜಸ್ಥಾನದ ಬಿಕಾನೇರ್ ನಲ್ಲಿ ವಿಶ್ವದ ಮೊದಲ ಹೈಡ್ರೋಜನ್ - ಅಮೋನಿಯಂ ಮತ್ತು ಸೋಲಾರ್ ಘಟಕವನ್ನು ಸ್ಥಾಪಿಸಿದ್ದು, ಕಾರ್ಯಾರಂಭ ಮಾಡಿದೆ ಎಂದು ಆಕ್ಮೆ ಗ್ರೂಪ್ ನ ಉಪಾಧ್ಯಕ್ಷ ಶಶಿ ಶೇಖರ್ ತಿಳಿಸಿದ್ದಾರೆ.

ಇತ್ತೀಚೆಗೆ ಸ್ವಿಟ್ಸರ್ಲೆಂಡಿನ ದಾವೊಸ್ ನಲ್ಲಿ ರೆನ್ಯೂ ಪವರ್ ಕಂಪೆನಿಯವರು ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ ಮಾಡಿಕೊಂಡಿತ್ತು. ಆಕ್ಮೆ ಜೊತೆಗಿನ ಒಪ್ಪಂದ ಏರ್ಪಟ್ಟ ವೇಳೆ, ಇಂಧನ ಸಚಿವ ವಿ. ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಆಕ್ಮೆ ಗ್ರೂಪ್ ಅಧಿಕಾರಿಗಳಾದ ಎಂ.ವಿ.ವಿ.ಎಸ್ ರೆಡ್ಡಿ, ಅರುಣ್ ಚೋಪ್ರಾ ಮತ್ತಿತರರು ಉಪಸ್ಥಿತರಿದ್ದರು.
Gurugram-based renewable energy company ACME Cleantech Solutions on Monday signed up with Karnataka proposing to invest about Rs 52,000 crore in a 1.2 million tonnes per annum (MTPA) green hydrogen and ammonia plant, along with an associated solar power unit in Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm