ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm