ಬ್ರೇಕಿಂಗ್ ನ್ಯೂಸ್
09-06-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಏಯ್ ನಾನ್ಯಾರು ಗೊತ್ತಾ.. ಅರವಿಂದ ಲಿಂಬಾವಳಿ ಮಗಳು ನಾನು, ಕಿರಿಕ್ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ.. ಹೀಗೆ ಮಾಜಿ ಸಚಿವ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ರಸ್ತೆ ಮಧ್ಯೆ ಟ್ರಾಫಿಕ್ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾಳೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಬಳಿ ಘಟನೆ ನಡೆದಿದೆ. ರ್ಯಾಶ್ ಡ್ರೈವ್ ಮಾಡಿಕೊಂಡು ಬಂದ ಯುವತಿ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರು ನಿಲ್ಲಿಸದೇ ಯುವತಿ ಮುನ್ನುಗ್ಗಿದ್ದಾಳೆ. ಚೇಸ್ ಮಾಡಿ ಕ್ಯಾಪಿಟಲ್ ಹೊಟೆಲ್ ಬಳಿ ಕಾರನ್ನು ಕಬ್ಬನ್ ಪಾರ್ಕ್ ವಿಭಾಗದ ಸಂಚಾರ ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ಪೊಲೀಸರೊದಿಗೆ ಯುವತಿ "ನಾನು ಯಾರು ಗೊತ್ತಾ? ಶಾಸಕ ಅರವಿಂದ್ ಲಿಂಬಾವಳಿ ಗೊತ್ತಾ? ಅರವಿಂದ ಲಿಂಬಾವಳಿ ಮಗಳು ನಾನು" ಎಂದು ವಾಗ್ವಾದಕ್ಕಿಳಿದಿದ್ದಾಳೆ. ಅರವಿಂದ್ ಲಿಂಬಾವಳಿ ಮಗಳು ನಾನು ಎಂದು ಏರುಧ್ವನಿಯಲ್ಲಿ ಕಿರಿಕ್ ಮಾಡಿದರೂ, ಪೊಲೀಸರು ಕೇಳಲಿಲ್ಲ. ಹಾಗಂತ, ನೀವು ತಪ್ಪು ಮಾಡುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಆದರೆ ಯುವತಿ ಅವಾಚ್ಯ ಶಬ್ದಗಳಿಂದ ಪೊಲೀಸರಿಗೇ ನಿಂದಿಸಿದ್ದಾಳೆ. ರ್ಯಾಶ್ ಡ್ರೈವ್ ಸೇರಿ ಹಳೆಯ ಕೇಸುಗಳನ್ನೆಲ್ಲ ತೆಗೆದು ದಂಡ ವಸೂಲಿ ಮಾಡಿರುವ ಪೊಲೀಸರು ಯುವತಿಯಿಂದ ಒಟ್ಟು 10 ಸಾವಿರ ರೂಪಾಯಿ ಕಕ್ಕಿಸಿದ್ದಾರೆ.
Former minister and BJP MLA Arvind Limbawali, who violated traffic rules, has been remanded to police for Rs 10,000. Fines have been imposed. The daughter of a limpawali, who was annoyed by the traffic stop, had a verbal altercation with the police as soon as she got out of the car. Do I know the daughter of MLA Aravind Limbaavali? Awaaz has called the police. Well, it is MLA Gaddi who has argued that I am the daughter of Aravind Limbayavali.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm