ಬ್ರೇಕಿಂಗ್ ನ್ಯೂಸ್
11-06-22 01:32 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ನಿನ್ನೆ ಶುಕ್ರವಾರವಾಗಿರೋದ್ರಿಂದ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಯಾವುದೇ ತೊಂದರೆ ಇಲ್ಲ. ಇದು ಮುಗಿದು ಹೋದ ಅಧ್ಯಾಯ, ಕ್ಷಮೆ ಕೇಳಿಯೂ ಆಗಿದೆ. ಅವರ ಮೇಲೆ ಕ್ರಮ ಕೂಡ ಆಗಿದೆ, ಆದ್ರೆ ಮತ್ತೇಕೆ ಪ್ರತಿಭಟನೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ. ಕರ್ನಾಟಕ ಶಾಂತಿ ಪ್ರಿಯರ ರಾಜ್ಯ ಇದನ್ನ ಕೆದಕುವ ಅಗತ್ಯವಿಲ್ಲ. ಸಿಎಂ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಎಲ್ಲಾ ಸ್ಟೇಷನ್ ಲಿಮಿಟ್ಸ್ ನಲ್ಲೂ ಸಮುದಾಯದ ನಾಯಕರನ್ನ ಕರೆದು ಮಾತನಾಡಿಸಲು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಕೆಎಸ್ ಆರ್ ಪಿ ಬ್ಯಟಾಲಿಯನ್ ಗಳನ್ನ ಕಳುಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ನಾನು ನಾಡಿನ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನಿನ್ನೆ ಶುಕ್ರವಾರವಾಗಿರೋದ್ರಿಂದ ಪ್ರತಿಭಟನೆ ನಡೆಸಿದ್ದಾರೆ. ಇವತ್ತು ಪ್ರತಿಭಟನೆ ಮಾಡ್ಲಿಕ್ಕಿಲ್ಲ.
ಸೋಷಿಯಲ್ ಮೀಡಿಯಾವನ್ನ ಎಲ್ಲಾ ಸ್ಟೇಷನ್ ನಲ್ಲೂ ಗಮನಿಸಲು ಸೂಚನೆ ಕೊಡಲಾಗಿದೆ. ಪ್ರಚೋದನಕಾರಿ ಸಂದೇಶ ಹಾಕಿದ್ರೆ ಅವರ ಮೇಲೆ ತಕ್ಷಣ ಪೋಲಿಸ್ ಕ್ರಮ ಕೈಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಗೆ ಎಲ್ಲರಿಗೂ ಅವಕಾಶ ಇದೆ. ಪರ್ಮಿಷನ್ ತಗೊಬೇಕು, ಎಲ್ಲಿ ಅಂತ ನಿರ್ದಿಷ್ಟ ಸ್ಥಳ ಹೇಳಬೇಕು. ಇಲ್ಲಾಂದ್ರೆ ಪ್ರತಿಭಟನೆ ಮಾಡೋಕೆ ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಪ್ರತಿಭಟನೆ ಅನವಶ್ಯಕ ಅಂತ ನನಗೆ ಅನ್ನಿಸ್ತಿದೆ. ಕೇಂದ್ರ ಗೃಹ ಇಲಾಖೆ ಸಹ ಅಲರ್ಟ್ ಕೊಟ್ಟಿದೆ. ರಾಜ್ಯ ಗುಪ್ತದಳ ಸಹ ಗಮನಿಸಿ ವರದಿ ಕೊಡ್ತಿದೆ. ಅದರ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
Home Minister Araga Jnanendra Speaks On Protest Over Prophet Remark In Karnataka.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am