ಬ್ರೇಕಿಂಗ್ ನ್ಯೂಸ್
11-06-22 01:32 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ನಿನ್ನೆ ಶುಕ್ರವಾರವಾಗಿರೋದ್ರಿಂದ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಯಾವುದೇ ತೊಂದರೆ ಇಲ್ಲ. ಇದು ಮುಗಿದು ಹೋದ ಅಧ್ಯಾಯ, ಕ್ಷಮೆ ಕೇಳಿಯೂ ಆಗಿದೆ. ಅವರ ಮೇಲೆ ಕ್ರಮ ಕೂಡ ಆಗಿದೆ, ಆದ್ರೆ ಮತ್ತೇಕೆ ಪ್ರತಿಭಟನೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ. ಕರ್ನಾಟಕ ಶಾಂತಿ ಪ್ರಿಯರ ರಾಜ್ಯ ಇದನ್ನ ಕೆದಕುವ ಅಗತ್ಯವಿಲ್ಲ. ಸಿಎಂ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಎಲ್ಲಾ ಸ್ಟೇಷನ್ ಲಿಮಿಟ್ಸ್ ನಲ್ಲೂ ಸಮುದಾಯದ ನಾಯಕರನ್ನ ಕರೆದು ಮಾತನಾಡಿಸಲು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಕೆಎಸ್ ಆರ್ ಪಿ ಬ್ಯಟಾಲಿಯನ್ ಗಳನ್ನ ಕಳುಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ನಾನು ನಾಡಿನ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನಿನ್ನೆ ಶುಕ್ರವಾರವಾಗಿರೋದ್ರಿಂದ ಪ್ರತಿಭಟನೆ ನಡೆಸಿದ್ದಾರೆ. ಇವತ್ತು ಪ್ರತಿಭಟನೆ ಮಾಡ್ಲಿಕ್ಕಿಲ್ಲ.
ಸೋಷಿಯಲ್ ಮೀಡಿಯಾವನ್ನ ಎಲ್ಲಾ ಸ್ಟೇಷನ್ ನಲ್ಲೂ ಗಮನಿಸಲು ಸೂಚನೆ ಕೊಡಲಾಗಿದೆ. ಪ್ರಚೋದನಕಾರಿ ಸಂದೇಶ ಹಾಕಿದ್ರೆ ಅವರ ಮೇಲೆ ತಕ್ಷಣ ಪೋಲಿಸ್ ಕ್ರಮ ಕೈಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಗೆ ಎಲ್ಲರಿಗೂ ಅವಕಾಶ ಇದೆ. ಪರ್ಮಿಷನ್ ತಗೊಬೇಕು, ಎಲ್ಲಿ ಅಂತ ನಿರ್ದಿಷ್ಟ ಸ್ಥಳ ಹೇಳಬೇಕು. ಇಲ್ಲಾಂದ್ರೆ ಪ್ರತಿಭಟನೆ ಮಾಡೋಕೆ ಅವಕಾಶ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಈ ಪ್ರತಿಭಟನೆ ಅನವಶ್ಯಕ ಅಂತ ನನಗೆ ಅನ್ನಿಸ್ತಿದೆ. ಕೇಂದ್ರ ಗೃಹ ಇಲಾಖೆ ಸಹ ಅಲರ್ಟ್ ಕೊಟ್ಟಿದೆ. ರಾಜ್ಯ ಗುಪ್ತದಳ ಸಹ ಗಮನಿಸಿ ವರದಿ ಕೊಡ್ತಿದೆ. ಅದರ ಆಧಾರದ ಮೇಲೆ ಪೊಲೀಸ್ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
Home Minister Araga Jnanendra Speaks On Protest Over Prophet Remark In Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm