ಬ್ರೇಕಿಂಗ್ ನ್ಯೂಸ್
12-06-22 06:07 pm HK News Desk ಕರ್ನಾಟಕ
ಮೈಸೂರು, ಜೂ 12: ಸಾಮಾನ್ಯವಾಗಿ ಕಬಿನಿ ಜಲಾಶಯದ ಹಿನ್ನೀರು ನೋಡಲು ಹೋದ ಪ್ರವಾಸಿಗರು ಎಲ್ಲಾದರೂ ದೈತ್ಯಾಕಾರದ ಉದ್ದನೆಯ ದಂತದ ಕಬಿನಿ ರಾಜ ಎಂದೇ ಕರೆಯಲ್ಪಡುತ್ತಿದ್ದ ಭೋಗೇಶ್ವರ ಎಂಬ ಹಿರಿಯ ಗಜವನ್ನು ಕಣ್ಣಾರೆ ನೋಡಲು ಕಾಯುತ್ತಿದ್ದರು. ಆದರೆ ಇನ್ಮುಂದೆ ಆ ದೈತ್ಯಗಜ ಕಾಣುವುದಿಲ್ಲ. ಎರಡು ದಿನಗಳ ಹಿಂದೆ ಅದು ಕೊನೆಯುಸಿರೆಳೆದಿದ್ದು, ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಇದರ ಕಳೆಬರ ಪತ್ತೆಯಾಗಿದೆ. ಹೀಗಾಗಿ ಇನ್ನು ಮುಂದೆ ಭೋಗೇಶ್ವರ ಬರೀ ನೆನಪು ಮಾತ್ರ
ಎಚ್. ಡಿ. ಕೋಟೆ ಎಂದ ತಕ್ಷಣವೇ ಹತ್ತಾರು ಮದಗಜಗಳು ನಮ್ಮ ಕಣ್ಣಮುಂದೆ ಹಾದು ಹೋಗುತ್ತವೆ. ಮೈಸೂರು ದಸರಾಕ್ಕೆ ಮೆರಗು ಹೆಚ್ಚಿಸುವಲ್ಲಿ ಇಲ್ಲಿನ ನೂರಾರು ಆನೆಗಳು ಸಾಥ್ ನೀಡಿವೆ. ಜತೆಗೆ ಇಲ್ಲಿನ ಕಾಕನಕೋಟೆಯ ಆನೆಗಳ ಖೆಡ್ಡಾ ಇವತ್ತಿಗೂ ನಮ್ಮೆಲ್ಲರ ಮನದಲ್ಲಿ ಅಚ್ಚೊತ್ತಿದಂತೆ ಉಳಿದಿದೆ.
ಭೋಗೇಶ್ವರ ಕಳೆದ ಮೂರು ದಶಕಗಳಿಂದಲೂ ಕಬಿನಿ ಹಿನ್ನೀರಿನ ಸಫಾರಿ ವಲಯದಲ್ಲಿ ಸೆಲೆಬ್ರೆಟಿ ಆನೆಯಾಗಿ ಹೆಸರುಗಳಿಸಿದ್ದ. ಫೋಟೋಗ್ರಾಫರ್ಗಳಿಂದ ಅತಿ ಹೆಚ್ಚು ಫೋಟೋ ಕ್ಲಿಕ್ಕಿಸಿಕೊಂಡ ಆನೆ ಎಂಬ ಕೀರ್ತಿಯೂ ಕೂಡ ಭೋಗೇಶ್ವರನಿಗೆ ಸಲ್ಲುತ್ತದೆ.

ದಟ್ಟವಾದ ಅರಣ್ಯ ಅದರಾಚೆಗೆ ಹಿಂಡು ಹಿಂಡಾಗಿ ಓಡಾಡುವ ಕಾಡಾನೆಗಳು, ಹೇರಳ ಅರಣ್ಯ ಸಂಪತ್ತು, ನಿಸರ್ಗ ಸೌಂದರ್ಯದಿಂದ ಕಂಗೊಳಿಸುವ ಬೆಟ್ಟಗುಡ್ಡಗಳು, ಅದರೊಳಗೆ ಬದುಕು ಕಟ್ಟಿಕೊಂಡಿರುವ ಕಾಡಿನ ಮಕ್ಕಳು, ನಾಲ್ಕು ಜಲಾಶಯಗಳು, ಅದರಾಚೆಗಿನ ಹಿನ್ನೀರು ಹೀಗೆ ಹತ್ತಾರು ವಿಶೇಷಗಳೊಂದಿಗೆ ಹೆಚ್. ಡಿ. ಕೋಟೆ ಗಮನಸೆಳೆಯುತ್ತದೆ. ಇದರ ನಡುವೆಯೂ ತನ್ನದೇ ಆದ ವೈಶಿಷ್ಟ್ಯತೆಗಳಿಂದ ಭೋಗೇಶ್ವರ ಆನೆ ಪ್ರವಾಸಿಗರ ಗಮನಸೆಳೆಯುತ್ತಿತ್ತು ಅಂದರೆ ಅದು ಇತರೆ ಆನೆಗಳಿಗಿಂತ ವಿಶಿಷ್ಟವಾಗಿತ್ತು ಅನ್ನೋದಂತು ಸತ್ಯ.

ಹಾಗೆನೋಡಿದರೆ ಎಚ್. ಡಿ. ಕೋಟೆಯ ಅರಣ್ಯ ಪ್ರದೇಶಗಳತ್ತ ಹೆಜ್ಜೆ ಹಾಕುವ ಪ್ರಾಣಿ ಪ್ರಿಯರು ಎರಡು ಪ್ರಾಣಿಗಳನ್ನು ನೋಡಲು ತವಕಿಸುತ್ತಿದ್ದರು. ಅದು ಯಾವುದೆಂದರೆ ಒಂದು ದೈತ್ಯಗಜ ಭೋಗೇಶ್ವರ ಮತ್ತೊಂದು ಕರಿಚಿರತೆ ಕಬೀರ. ನಾವು ದೈತ್ಯಗಜ ಬೋಗೇಶ್ವರನ ಬಗ್ಗೆ ತಿಳಿಯುತ್ತಾ ಹೋದರೆ ಅದು ತನ್ನ ಪಾಡಿಗೆ ತಾನು ಎಂಬಂತೆ ಕಬಿನಿ ಹಿನ್ನೀರು ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜೀವಿಸುತ್ತಿದ್ದ ನಿರುಪದ್ರವಿ ಜೀವಿಯಾಗಿತ್ತು.

ದೈತ್ಯಾಕಾರ, ಉದ್ದನೆಯ ದಂತ ವಿಶೇಷತೆ;
ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಹಿನ್ನೀರಿನಲ್ಲಿ ಪ್ರಾಣಿಗಳ ದಂಡುಗಳು ಕಂಡು ಬರುತ್ತವೆ. ಇವು ಎಲ್ಲ ದಿನಗಳಲ್ಲಿ ಕಾಣಲು ಅಸಾಧ್ಯ. ಸಾಮಾನ್ಯವಾಗಿ ಬೇಸಿಗೆಯ ದಿನಗಳಲ್ಲಿ ಮಾತ್ರ ಕಂಡು ಬರುತ್ತದೆ. ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಕಡೆಗೆ ಅಡ್ಡಾಡುವುದರಿಂದ ಪ್ರತಿದಿನವೂ ಇಲ್ಲಿಗೆ ಬಾರದೆ ಯಾವತ್ತಾದರೊಮ್ಮೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸುತ್ತಿವೆ. ಸಾಮಾನ್ಯವಾಗಿ ನೀರು ಕುಡಿಯಲು ಕಾಡಾನೆಗಳು ಹಿಂಡು ಹಿಂಡಾಗಿ ಬರುತ್ತವೆ. ಆದರೆ ಭಾರೀ ಗಾತ್ರದ, ಉದ್ದದ ಕೋರೆಯ ಕಾಡಾನೆಯೊಂದು ಅಪರೂಪಕ್ಕೆ ಕಾಣಿಸಿಕೊಂಡು ಗಮನಸೆಳೆಯುತ್ತಿತ್ತು. ಅದೇ ಭೋಗೇಶ್ವರ.
Mysuru elephant Bhogeswara also know as King of Kabini found dead in Gundre forest.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm