ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm