ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am