ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm