ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.
ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm