ಬ್ರೇಕಿಂಗ್ ನ್ಯೂಸ್
16-06-22 07:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂ. 16: ಬಿಜೆಪಿಯವರೇ ನೀವೇ ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಇರಲು ಸಾಧ್ಯವಿಲ್ಲ. ನಿಮ್ಮ ಕೇಡುಗಾಲ, ಅವನತಿ ಆಗಮಿಸುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ. ಬಿಜೆಪಿ ನಿರ್ಣಾಮವಾಗಲಿದೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಿಮ್ಮ ಗೋಸುಂಬೆ ನಾಟಕ ರಾಜ್ಯದಲ್ಲಿ ನಡೆಯುವುದಿಲ್ಲ. ಜನರಿಗೆ ಅರ್ಥವಾಗಿದೆ. ನಾವು ಬಂಧನವಾದರೂ, ಜೈಲಿಗೆ ಹೋಗಲು ತಯಾರಾಗೋಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ರಾಜಭವನ ಚಲೋ ಪ್ರತಿಭಟನೆ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿ, "ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಪೊಲೀಸರು ತಡೆಯಬಹುದು. ಯಾರೂ ಎದೆಗುಂದುವ ಅಗತ್ಯವಿಲ್ಲ. ಪೊಲೀಸರು ಬಂಧಿಸಲಿ, ಜೈಲಿಗೆ ಹಾಕಲಿ ನೀವೆಲ್ಲರೂ ಗಟ್ಟಿಯಾಗಿ ನಿಲ್ಲಿ. ನೀವು ಧೈರ್ಯವಾಗಿರಿ. ನಾಳೆ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಎಲ್ಲ ಶಾಸಕರು, ಪದಾಧಿಕಾರಿಗಳು, ಸಂಸದರು ನಿಮ್ಮ ಜಿಲ್ಲೆಗೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ. ಕಾಂಗ್ರೆಸ್ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ," ಎಂದರು.
ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ನೀತಿ ಖಂಡಿಸಿ ಪ್ರತಿಭಟಿಸಲು, ಎಲ್ಲ ರಾಜ್ಯಗಳಲ್ಲೂ ರಾಜಭವನ ಮುತ್ತಿಗೆ ಹಾಕಲು ಕಾಂಗ್ರೆಸ್ ಪಕ್ಷ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಕೆಪಿಸಿಸಿ ವತಿಯಿಂದ ರಾಜಭವನ ಮುತ್ತಿಗೆ ಹಾಕಿ, ನಮ್ಮ ಆಕ್ರೋಶ ವ್ಯಕ್ತಪಡಿಸಿ, ಈ ನೆಲದ ಕಾನೂನು ಉಳಿಸಿ, ಸಂವಿಧಾನ ಉಳಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಹಣಕಾಸು ಅವ್ಯವಹಾರದ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ನಮ್ಮ ನಾಯಕರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ನಾವೆಲ್ಲರೂ ಈ ಸಂದರ್ಭದಲ್ಲಿ ಅವರ ಬೆನ್ನಿಗೆ ನಿಲ್ಲಬೇಕಾಗಿದೆ. ತನಿಖೆ ಮಾಡಲು ನಮ್ಮ ವಿರೋಧ ಇಲ್ಲ. ಆದರೆ ದುರುದ್ದೇಶದಿಂದ ಷಡ್ಯಂತ್ರ ರೂಪಿಸಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವರ್ಚಸ್ಸು ಹಾಳು ಮಾಡಲು ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
‘ಭಾರತ್ ಜೋಡೋ’ ಎಂಬ ಪಾದಯಾತ್ರೆ;
ಉದಯಪುರ ಸಂಕಲ್ಪ ಶಿಬಿರದಲ್ಲಿ ಎಐಸಿಸಿ ‘ಭಾರತ್ ಜೋಡೋ' ಎಂಬ ಪಾದಯಾತ್ರೆಯನ್ನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಾಡಲು ತೀರ್ಮಾನಿಸಲಾಗಿದ್ದು, ಇದನ್ನು ಮಾಡಿದರೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವರ್ಚಸ್ಸು ಹೆಚ್ಚುತ್ತದೆ ಎಂದು ಬಿಜೆಪಿ ಈ ಕುತಂತ್ರ ಮಾಡಿದೆ. ಈ ವಿಚಾರವನ್ನು ಜನರಿಗೆ ತಿಳಿಸಬೇಕು. ದೇಶದಲ್ಲಿ ಅನೇಕ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕೂಡ ಮಾಡಿದೆ. ಕಾಂಗ್ರೆಸ್ ಯಾವತ್ತೂ ದ್ವೇಷದ ರಾಜಕಾರಣ ಮಾಡಿಲ್ಲ. ಬಿಜೆಪಿ ದ್ವೇಷದ ರಾಜಕಾರಣ ಆರಂಭಿಸಿದೆ. ಆಮೂಲಕ ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕುತ್ತೇವೆ, ಕಾರ್ಯಕರ್ತರ ಮನಸ್ಥೈರ್ಯ ಕುಗ್ಗಿಸುತ್ತೇವೆ, ಆಮೂಲಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರ ವರ್ಚಸ್ಸು ಕಡಿಮೆ ಮಾಡುತ್ತೇವೆ ಎಂಬ ಕೆಟ್ಟ ಆಲೋಚನೆಯಿಂದ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಡಿಸಿದರು.
ಸತತ ಮೂರು ದಿನಗಳ ಕಾಲ 30 ಗಂಟೆಗಳ ವಿಚಾರಣೆ ಮಾಡಿ ಮತ್ತೆ ಸಮನ್ಸ್ ನೀಡಿದ್ದಾರೆ. ಸರ್ಕಾರ ಕೇಂದ್ರ ತನಿಖಾ ಸಂಸ್ಥೆ ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ. ಇವರ ದೌರ್ಜನ್ಯ ಹೇಗಿದೆ ಎಂದರೆ ದೆಹಲಿಯ ಕಾಂಗ್ರೆಸ್ ಕಚೇರಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಪಕ್ಷದ ಪದಾಧಿಕಾರಿಗಳು, ಸಂಸದರು ಹೋಗಲು ಅವಕಾಶ ನೀಡುತ್ತಿಲ್ಲ. ಹೋದರೆ ಅವರನ್ನು ಬಂಧಿಸುತ್ತಿದ್ದಾರೆ. ಬ್ರಿಟೀಷರ ಕಾಲದಲ್ಲೂ ಇಂತಹ ಘಟನೆ, ಪ್ರಜಾಪ್ರಭುತ್ವ ವಿರೋಧಿ ಘಟನೆ ನಡೆದಿರಲಿಲ್ಲ.
ನಾಳೆ ಬೇರೆ ಪಕ್ಷಗಳಿಗೂ ಇದೇ ಅನ್ಯಾಯ ಆಗಲಿದೆ;
ನಮ್ಮ ಸಂಸದ ಡಿ.ಕೆ. ಸುರೇಶ್, ವೇಣುಗೋಪಾಲ್, ದಿನೇಶ್ ಗುಂಡೂರಾವ್ ಅವರನ್ನು ನಡೆಸಿಕೊಂಡ ರೀತಿ ನಾವು ನೋಡಿದ್ದೇವೆ. ದೇಶದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಪ್ರಜಾಪ್ರಭುತ್ವ ಕಗ್ಗೊಲೆಯಾಗಲು ಬಿಡಬಾರದು. ಸಂವಿಧಾನಕ್ಕೆ ಅಗೌರವಕ್ಕೆ ಅವಕಾಶ ನೀಡಬಾರದು. ಈ ನೆಲದ ಕಾನೂನು ನಾಶ ಮಾಡಲು ಅವಕಾಶ ನೀಡಬಾರದು. ಇವರಿಗೆ ತಕ್ಕ ಪಾಠವನ್ನು ಕಾಂಗ್ರೆಸ್ ಕಲಿಸಬೇಕಿದೆ. ಇಂದು ಕಾಂಗ್ರೆಸ್ ಪಕ್ಷಕ್ಕೆ ಆಗಿರುವ ಅನ್ಯಾಯ ನಾಳೆ ಬೇರೆ ಪಕ್ಷಗಳಿಗೆ ಆಗಲಿದೆ.
ಇದು ದೇಶಕ್ಕೆ ಒದಗಿರುವ ಆಪತ್ತು. ಎಲ್ಲ ಬಿಜೆಪಿಯೇತ್ತರ ಪಕ್ಷಗಳು ಇದನ್ನು ಖಂಡಿಸಬೇಕು ಎಂದು ಮನವಿ ಮಾಡುತ್ತೇನೆ. ಮಮತಾ ಬ್ಯಾನರ್ಜಿ, ಶರದ್ ಪವಾರ್, ಸ್ಟಾಲಿನ್, ಕಮುನಿಷ್ಟ್ ಪಕ್ಷದವರಿರಬಹುದು, ಅಖಿಲೇಶ್ ಯಾದವ್ ಎಲ್ಲರೂ ಇದನ್ನು ಖಂಡಿಸಬೇಕಾಗುತ್ತದೆ. ಇದು ದೇಶದ ಮೇಲೆ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಮಾಡಿರುವ ಗದಾಪ್ರಹಾರ.
#WATCH | Karnataka Congress chief DK Shivakumar, CLP leader Siddaramaiah and other leaders and workers of the party detained by Police during their protest in Bengaluru against ED and the questioning of Rahul Gandhi. pic.twitter.com/eF8yRw7dG9
— ANI (@ANI) June 16, 2022
Congress will surely come to power in Karnataka in 2023 says Siddaramaiah during the rally held in Bangalore for the Ed torture to Rahul Gandhi.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm