ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 06:22 pm
Mangalore Correspondent
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm