ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm