ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am