ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm