ಬ್ರೇಕಿಂಗ್ ನ್ಯೂಸ್
17-06-22 03:32 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ಅಗ್ನಿಪಥ್ ಯೋಜನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.
ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತ ಅಜೆಂಡಾ ಏನಾದರೂ ಇದೆಯೇ?
ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಪ್ರಶ್ನಿಸಿದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.
ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟು ಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?
ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲವಾಗಿದೆ.
ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ @BJP4India ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ @narendramodi. 4/6#JaiJawan_JaiKisan
— Siddaramaiah (@siddaramaiah) June 17, 2022
ರಾಜ್ಯದ ಜನರಿಗೆ ಉಚಿತ ಅನ್ನ ಭಾಗ್ಯ ನೀಡಿದಾಗ ಇದರ ಪರಿವೆ ಇರಲಿಲ್ಲ ಅಲ್ಲವೇ?
— 🚩ಜನನಿ ಜಿ.ಎಮ್.ಕೆ.🚩🇮🇳 (@JananigmkG) June 17, 2022
ಅಗ್ನಿಪಥ್ ಬಗ್ಗೆ ತಿಳಿದು ಸುಳ್ಳು ಹೇಳುವಿರಾ?
ಈ ಅಗ್ನಿಪಥ್ ನಲ್ಲಿ ನಾಲ್ಕು ವರ್ಷಗಳ ಕಾಲ 30/40K ಸಂಬಳ ನೀಡಲಾಗುತ್ತೆ ಹಾಗೆ ಮುಕ್ತಯವಾದ ನಂತರ 10/15lakh ಪ್ರೋತ್ಸಾಹ ಧನ ನೀಡುತ್ತದೆ. ಸಾಕು ಅಲ್ವಾ ಇಷ್ಟು ಮುಂದಿನ ಜೀವನ ಮಾಡೋಕೆ. ಹಾಗೇ
Leader of Opposition Siddaramaiah asked the NDA government led by Prime Minister Narendra Modi to drop ‘Agnipath’, a new scheme for recruitment of soldiers, as ‘it will push youth into unemployment and will have adverse impact on security of the country’.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm