ಬ್ರೇಕಿಂಗ್ ನ್ಯೂಸ್
18-06-22 05:05 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ಬೆಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಜನವಸತಿ ಬಡಾವಣೆಗಳಿಗೆ ನೀರು ನುಗ್ಗಿದೆ. ಮಳೆಯ ಅನಾಹುತಕ್ಕೆ 24 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆ ಸಾವು ಕಂಡಿದ್ದಾರೆ.
ಕೆ.ಆರ್ ಪುರಂ ಸಮೀಪದ ಗಾಯತ್ರಿ ಬಡಾವಣೆಯಲ್ಲಿ ರಾತ್ರಿ 12 ಗಂಟೆ ವೇಳೆಗೆ ರಾಜಕಾಲುವೆಯಲ್ಲಿ ನೀರು ಉಕ್ಕಿ ಬಂದಿದ್ದು, ಶಿವಮೊಗ್ಗ ಮೂಲದ ಮಿಥುನ್ (24) ತಾನು ವಾಸವಿದ್ದ ಕಟ್ಟಡದ ಬಳಿ ನೀರು ಬಂದು ಕಂಪೌಂಡ್ ಗೋಡೆ ಬಿದ್ದುದನ್ನು ನೋಡಲು ಹೋಗಿದ್ದ. ಅಲ್ಲಿ ನಿಲ್ಲಿಸಿದ್ದ ಬೈಕ್ ತೆರವು ಮಾಡಲು ಪ್ರಯತ್ನಿಸಿದ್ದು, ಈ ವೇಳೆ ಬೈಕ್ ಸಹಿತ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾನೆ. ಮಿಥುನ್ ಮತ್ತು ಇತರ ನಾಲ್ವರು ಒಂದೇ ರೂಮಿನಲ್ಲಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಇಂದು ಬೆಳಗ್ಗೆ ಅಗ್ನಿಶಾಮಕ ದಳ ಮತ್ತು ಎಸ್ ಡಿಆರ್ ಎಫ್ ಸಿಬಂದಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ರಾಜಕಾಲುವೆ ನಡುವಿನ ಕಬ್ಬಿಣದ ಜಾಲರಿಯಲ್ಲಿ ಹುಡುಕಾಟ ನಡೆಸಿದ್ದು ಯುವಕನ ಪತ್ತೆಯಾಗಿಲ್ಲ. ಬೆಂಗಳೂರು ಪೂರ್ವ ಭಾಗದಲ್ಲಿ ರಾತ್ರಿಯಿಂದ ಬೆಳಗ್ಗಿನ ವರೆಗೂ ಮಳೆಯಾಗಿದ್ದು, ರಾಮಮೂರ್ತಿ ನಗರ, ಕೆ.ಆರ್ ಪುರಂ, ಕಲ್ಕೆರೆ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಇದೇ ವೇಳೆ, ರಾತ್ರಿ ಸುರಿದ ಮಳೆಗೆ ಗರುಡಾಚಾರ್ ಪಾಳ್ಯ ಸಮೀಪದ ಕಾವೇರಿ ನಗರದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಮುನಿಯಮ್ಮ (55) ಮೃತ ಮಹಿಳೆ. ಮಳೆಗೆ ಮನೆಯ ಗೋಡೆ ಕುಸಿದಿದ್ದು, ಅದರ ಅವಶೇಷಗಳಡಿ ಸಿಲುಕಿ ಮಹಿಳೆ ಸಾವು ಕಂಡಿದ್ದಾರೆ. ಮಹದೇವರ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಮೊದಲ ಮಳೆಗೇ ಬೆಂಗಳೂರು ನಲುಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ.
Bangalore heavy rains, water enters into houses, two dead. Bengaluru saw monsoon rainfall for the second consecutive day, making this June one of the wettest on record after a brief lull. On Friday night, much of eastern, western, central, and northern Bengaluru got moderate to heavy rain. According to the BBMP control room, there were no rain-related complaints.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm