ಬ್ರೇಕಿಂಗ್ ನ್ಯೂಸ್
18-06-22 05:05 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ಬೆಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಜನವಸತಿ ಬಡಾವಣೆಗಳಿಗೆ ನೀರು ನುಗ್ಗಿದೆ. ಮಳೆಯ ಅನಾಹುತಕ್ಕೆ 24 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆ ಸಾವು ಕಂಡಿದ್ದಾರೆ.
ಕೆ.ಆರ್ ಪುರಂ ಸಮೀಪದ ಗಾಯತ್ರಿ ಬಡಾವಣೆಯಲ್ಲಿ ರಾತ್ರಿ 12 ಗಂಟೆ ವೇಳೆಗೆ ರಾಜಕಾಲುವೆಯಲ್ಲಿ ನೀರು ಉಕ್ಕಿ ಬಂದಿದ್ದು, ಶಿವಮೊಗ್ಗ ಮೂಲದ ಮಿಥುನ್ (24) ತಾನು ವಾಸವಿದ್ದ ಕಟ್ಟಡದ ಬಳಿ ನೀರು ಬಂದು ಕಂಪೌಂಡ್ ಗೋಡೆ ಬಿದ್ದುದನ್ನು ನೋಡಲು ಹೋಗಿದ್ದ. ಅಲ್ಲಿ ನಿಲ್ಲಿಸಿದ್ದ ಬೈಕ್ ತೆರವು ಮಾಡಲು ಪ್ರಯತ್ನಿಸಿದ್ದು, ಈ ವೇಳೆ ಬೈಕ್ ಸಹಿತ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾನೆ. ಮಿಥುನ್ ಮತ್ತು ಇತರ ನಾಲ್ವರು ಒಂದೇ ರೂಮಿನಲ್ಲಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ ಅಗ್ನಿಶಾಮಕ ದಳ ಮತ್ತು ಎಸ್ ಡಿಆರ್ ಎಫ್ ಸಿಬಂದಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ರಾಜಕಾಲುವೆ ನಡುವಿನ ಕಬ್ಬಿಣದ ಜಾಲರಿಯಲ್ಲಿ ಹುಡುಕಾಟ ನಡೆಸಿದ್ದು ಯುವಕನ ಪತ್ತೆಯಾಗಿಲ್ಲ. ಬೆಂಗಳೂರು ಪೂರ್ವ ಭಾಗದಲ್ಲಿ ರಾತ್ರಿಯಿಂದ ಬೆಳಗ್ಗಿನ ವರೆಗೂ ಮಳೆಯಾಗಿದ್ದು, ರಾಮಮೂರ್ತಿ ನಗರ, ಕೆ.ಆರ್ ಪುರಂ, ಕಲ್ಕೆರೆ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.


ಇದೇ ವೇಳೆ, ರಾತ್ರಿ ಸುರಿದ ಮಳೆಗೆ ಗರುಡಾಚಾರ್ ಪಾಳ್ಯ ಸಮೀಪದ ಕಾವೇರಿ ನಗರದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಮುನಿಯಮ್ಮ (55) ಮೃತ ಮಹಿಳೆ. ಮಳೆಗೆ ಮನೆಯ ಗೋಡೆ ಕುಸಿದಿದ್ದು, ಅದರ ಅವಶೇಷಗಳಡಿ ಸಿಲುಕಿ ಮಹಿಳೆ ಸಾವು ಕಂಡಿದ್ದಾರೆ. ಮಹದೇವರ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಮೊದಲ ಮಳೆಗೇ ಬೆಂಗಳೂರು ನಲುಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ.
Bangalore heavy rains, water enters into houses, two dead. Bengaluru saw monsoon rainfall for the second consecutive day, making this June one of the wettest on record after a brief lull. On Friday night, much of eastern, western, central, and northern Bengaluru got moderate to heavy rain. According to the BBMP control room, there were no rain-related complaints.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm