ಬ್ರೇಕಿಂಗ್ ನ್ಯೂಸ್
18-06-22 05:05 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ಬೆಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಜನವಸತಿ ಬಡಾವಣೆಗಳಿಗೆ ನೀರು ನುಗ್ಗಿದೆ. ಮಳೆಯ ಅನಾಹುತಕ್ಕೆ 24 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆ ಸಾವು ಕಂಡಿದ್ದಾರೆ.
ಕೆ.ಆರ್ ಪುರಂ ಸಮೀಪದ ಗಾಯತ್ರಿ ಬಡಾವಣೆಯಲ್ಲಿ ರಾತ್ರಿ 12 ಗಂಟೆ ವೇಳೆಗೆ ರಾಜಕಾಲುವೆಯಲ್ಲಿ ನೀರು ಉಕ್ಕಿ ಬಂದಿದ್ದು, ಶಿವಮೊಗ್ಗ ಮೂಲದ ಮಿಥುನ್ (24) ತಾನು ವಾಸವಿದ್ದ ಕಟ್ಟಡದ ಬಳಿ ನೀರು ಬಂದು ಕಂಪೌಂಡ್ ಗೋಡೆ ಬಿದ್ದುದನ್ನು ನೋಡಲು ಹೋಗಿದ್ದ. ಅಲ್ಲಿ ನಿಲ್ಲಿಸಿದ್ದ ಬೈಕ್ ತೆರವು ಮಾಡಲು ಪ್ರಯತ್ನಿಸಿದ್ದು, ಈ ವೇಳೆ ಬೈಕ್ ಸಹಿತ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾನೆ. ಮಿಥುನ್ ಮತ್ತು ಇತರ ನಾಲ್ವರು ಒಂದೇ ರೂಮಿನಲ್ಲಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ ಅಗ್ನಿಶಾಮಕ ದಳ ಮತ್ತು ಎಸ್ ಡಿಆರ್ ಎಫ್ ಸಿಬಂದಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ರಾಜಕಾಲುವೆ ನಡುವಿನ ಕಬ್ಬಿಣದ ಜಾಲರಿಯಲ್ಲಿ ಹುಡುಕಾಟ ನಡೆಸಿದ್ದು ಯುವಕನ ಪತ್ತೆಯಾಗಿಲ್ಲ. ಬೆಂಗಳೂರು ಪೂರ್ವ ಭಾಗದಲ್ಲಿ ರಾತ್ರಿಯಿಂದ ಬೆಳಗ್ಗಿನ ವರೆಗೂ ಮಳೆಯಾಗಿದ್ದು, ರಾಮಮೂರ್ತಿ ನಗರ, ಕೆ.ಆರ್ ಪುರಂ, ಕಲ್ಕೆರೆ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.


ಇದೇ ವೇಳೆ, ರಾತ್ರಿ ಸುರಿದ ಮಳೆಗೆ ಗರುಡಾಚಾರ್ ಪಾಳ್ಯ ಸಮೀಪದ ಕಾವೇರಿ ನಗರದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಮುನಿಯಮ್ಮ (55) ಮೃತ ಮಹಿಳೆ. ಮಳೆಗೆ ಮನೆಯ ಗೋಡೆ ಕುಸಿದಿದ್ದು, ಅದರ ಅವಶೇಷಗಳಡಿ ಸಿಲುಕಿ ಮಹಿಳೆ ಸಾವು ಕಂಡಿದ್ದಾರೆ. ಮಹದೇವರ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಮೊದಲ ಮಳೆಗೇ ಬೆಂಗಳೂರು ನಲುಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ.
Bangalore heavy rains, water enters into houses, two dead. Bengaluru saw monsoon rainfall for the second consecutive day, making this June one of the wettest on record after a brief lull. On Friday night, much of eastern, western, central, and northern Bengaluru got moderate to heavy rain. According to the BBMP control room, there were no rain-related complaints.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm