ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm