ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm