ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm