ಬ್ರೇಕಿಂಗ್ ನ್ಯೂಸ್
21-06-22 12:54 pm HK News Desk ಕರ್ನಾಟಕ
Photo credits : ANI news
ಮೈಸೂರು, ಜೂ 21: ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಸ್ತುಪ್ರದರ್ಶನ ಮೈದಾನದಲ್ಲಿಆಯೋಜಿಸಿದ್ದ ಸಮಗ್ರ ಡಿಜಿಟಲ್ ಯೋಗ ಪ್ರದರ್ಶನವನ್ನು ವೀಕ್ಷಿಸಿದರು.
ವಸ್ತು ಪ್ರದರ್ಶನ ಮೈದಾನದ ಪ್ರವೇಶ ದ್ವಾರದಲ್ಲಿಯೇ ಡಿಜಿಟಲ್ ಯೋಗ ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಹಯೋಗದಲ್ಲಿಈ ಡಿಜಿಟಲ್ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಪ್ರತಿಯೊಂದು ಆಸನವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ದೃಶ್ಯ ಸಮೇತ ಮಾಹಿತಿ ನೀಡಲಾಗಿತ್ತು.

ಅರಮನೆ ಆವರಣದಲ್ಲಿ ಯೋಗಾಸನ ಮುಗಿಸಿಕೊಂಡು ನೇರವಾಗಿ ವಸ್ತು ಪ್ರದರ್ಶನ ಮೈದಾನಕ್ಕೆ ಬಂದ ಪ್ರಧಾನಿ ಡಿಜಿಟಲ್ ಯೋಗ ಪ್ರದರ್ಶನವನ್ನು ಉದ್ಘಾಟಿಸಿದರು. ಯೋಗ ಶಿಕ್ಷಣ ನೀಡುವ ಸಂಸ್ಥೆಗಳು, ಅಕಾಡೆಮಿಗಳ ಭರಪೂರ ಮಾಹಿತಿಯೊಂದಿಗೆ ದೇಶಿಯ ಉತನ್ನಗಳನ್ನು ಖುದ್ದು ಮೋದಿ ವೀಕ್ಷಿಸಿದರು.

143 ಮಳಿಗೆ ಸ್ಥಾಪನೆ;
ಆಯುಷ್ ವಸ್ತು ಪ್ರದರ್ಶನದಲ್ಲಿ 143 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಯೋಗ ಶಿಕ್ಷಣ ಸಂಸ್ಥೆಗಳು, ಯೋಗ ಕಾಲೇಜು, ಯೋಗ ಚಿಕಿತ್ಸಾ ಕೇಂದ್ರ, ಆಸ್ಪತ್ರೆಗಳು, ಆಯುರ್ವೇದ ಔಷಧಿ ಕಂಪನಿಗಳಿಗೆ ಮಳಿಗೆಗಳನ್ನು ನೀಡಲಾಗಿದೆ.
ಸ್ವದೇಶಿ ಕಂಪೆನಿಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲವು ಮಳಿಗೆಗಳಲ್ಲಿ ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಲಾಗಿದೆ. ಇದರಲ್ಲಿ ಯೋಗಾಸನದಿಂದ ಸಿಗುವ ಪ್ರಯೋಜನದ ಮಾಹಿತಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ನೀಡಗುತ್ತಿದೆ.

ಎರಡು ದಿನ ಪ್ರದರ್ಶನ ವ್ಯವಸ್ಥೆ;
ಆಯುಷ್ನ ಡಿಜಿಟಲ್ ಯೋಗ ಪ್ರದರ್ಶನ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದ್ದು, ಮಂಗಳರವಾರದಿಂದ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ಇರಲಿದೆ. ಎರಡು ದಿನಗಳ ಈ ಆಯುಷ್ ಪ್ರದರ್ಶನವನ್ನು ಇನ್ನೊಂದು ವಾರಕ್ಕೆ ವಿಸ್ತರಿಸಲು ಆಯುಷ್ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದ್ದು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಯೋಗ ಪ್ರದರ್ಶನ ಸದುಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ತಿಳಿಸಿದ್ದಾರೆ.
Prime Minister Narendra Modi, who is in Karnataka, attended a digital exhibition on Yoga in Mysuru on International Yoga Day.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm