ಬ್ರೇಕಿಂಗ್ ನ್ಯೂಸ್
21-06-22 12:54 pm HK News Desk ಕರ್ನಾಟಕ
Photo credits : ANI news
ಮೈಸೂರು, ಜೂ 21: ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಸ್ತುಪ್ರದರ್ಶನ ಮೈದಾನದಲ್ಲಿಆಯೋಜಿಸಿದ್ದ ಸಮಗ್ರ ಡಿಜಿಟಲ್ ಯೋಗ ಪ್ರದರ್ಶನವನ್ನು ವೀಕ್ಷಿಸಿದರು.
ವಸ್ತು ಪ್ರದರ್ಶನ ಮೈದಾನದ ಪ್ರವೇಶ ದ್ವಾರದಲ್ಲಿಯೇ ಡಿಜಿಟಲ್ ಯೋಗ ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಇಲಾಖೆಯು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಹಯೋಗದಲ್ಲಿಈ ಡಿಜಿಟಲ್ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಪ್ರತಿಯೊಂದು ಆಸನವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ದೃಶ್ಯ ಸಮೇತ ಮಾಹಿತಿ ನೀಡಲಾಗಿತ್ತು.

ಅರಮನೆ ಆವರಣದಲ್ಲಿ ಯೋಗಾಸನ ಮುಗಿಸಿಕೊಂಡು ನೇರವಾಗಿ ವಸ್ತು ಪ್ರದರ್ಶನ ಮೈದಾನಕ್ಕೆ ಬಂದ ಪ್ರಧಾನಿ ಡಿಜಿಟಲ್ ಯೋಗ ಪ್ರದರ್ಶನವನ್ನು ಉದ್ಘಾಟಿಸಿದರು. ಯೋಗ ಶಿಕ್ಷಣ ನೀಡುವ ಸಂಸ್ಥೆಗಳು, ಅಕಾಡೆಮಿಗಳ ಭರಪೂರ ಮಾಹಿತಿಯೊಂದಿಗೆ ದೇಶಿಯ ಉತನ್ನಗಳನ್ನು ಖುದ್ದು ಮೋದಿ ವೀಕ್ಷಿಸಿದರು.

143 ಮಳಿಗೆ ಸ್ಥಾಪನೆ;
ಆಯುಷ್ ವಸ್ತು ಪ್ರದರ್ಶನದಲ್ಲಿ 143 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಯೋಗ ಶಿಕ್ಷಣ ಸಂಸ್ಥೆಗಳು, ಯೋಗ ಕಾಲೇಜು, ಯೋಗ ಚಿಕಿತ್ಸಾ ಕೇಂದ್ರ, ಆಸ್ಪತ್ರೆಗಳು, ಆಯುರ್ವೇದ ಔಷಧಿ ಕಂಪನಿಗಳಿಗೆ ಮಳಿಗೆಗಳನ್ನು ನೀಡಲಾಗಿದೆ.
ಸ್ವದೇಶಿ ಕಂಪೆನಿಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲವು ಮಳಿಗೆಗಳಲ್ಲಿ ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಲಾಗಿದೆ. ಇದರಲ್ಲಿ ಯೋಗಾಸನದಿಂದ ಸಿಗುವ ಪ್ರಯೋಜನದ ಮಾಹಿತಿಯನ್ನು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ನೀಡಗುತ್ತಿದೆ.

ಎರಡು ದಿನ ಪ್ರದರ್ಶನ ವ್ಯವಸ್ಥೆ;
ಆಯುಷ್ನ ಡಿಜಿಟಲ್ ಯೋಗ ಪ್ರದರ್ಶನ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದ್ದು, ಮಂಗಳರವಾರದಿಂದ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ಇರಲಿದೆ. ಎರಡು ದಿನಗಳ ಈ ಆಯುಷ್ ಪ್ರದರ್ಶನವನ್ನು ಇನ್ನೊಂದು ವಾರಕ್ಕೆ ವಿಸ್ತರಿಸಲು ಆಯುಷ್ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದ್ದು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಯೋಗ ಪ್ರದರ್ಶನ ಸದುಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ತಿಳಿಸಿದ್ದಾರೆ.
Prime Minister Narendra Modi, who is in Karnataka, attended a digital exhibition on Yoga in Mysuru on International Yoga Day.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm