ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.

ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm