ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.

ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am