ಬ್ರೇಕಿಂಗ್ ನ್ಯೂಸ್
21-06-22 07:54 pm HK News Desk ಕರ್ನಾಟಕ
ಮಂಡ್ಯ, ಜೂ 21 : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ್ ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ್ ಕೇಂದ್ರದ ಪ್ರಾಂಶುಪಾಲ ನಾಗಾನಂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ ಶಾಸಕ ಕೇಂದ್ರವನ್ನು ಉದ್ಘಾಟಿಸಿದರು. ನಂತರ ನಗರಸಭಾಧ್ಯಕ್ಷ ಎಚ್.ಎಸ್. ಮಂಜು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಮತ್ತು ನಗರಸಭಾಧ್ಯಕ್ಷ ಪ್ರಯೋಗಾಲಯದ ಒಳಗೆ ತೆರಳಿದದರು, ಆದರೆ ಕಿರಿದಾದ ಜಾಗವಾಗಿದ್ದರಿಂದ ಪ್ರಾಂಶುಪಾಲರು ಮುಂದೆ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಂಪ್ಯೂಟರ್ ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನು ಹುಡುಕಾಡಿದ್ದಾರೆ.

ತಡವಾಗಿ ಮುಂದೆ ಬಂದಿದ್ದರಿಂದ ಕುಪಿತಗೊಂಡ ಶ್ರೀನಿವಾಸ್ ಪ್ರಾಂಶುಪಾಲರಾದ ನಾಗಾನಂದ್ ಮುಂದೆ ಬರುತ್ತಿದ್ದಂತೆ ಅವರಿಗೆ ಮೂರ್ನಾಲ್ಕು ಏಟುಕೊಟ್ಟಿದ್ದಾರೆ. ಬಂದ ಅತಿಥಿಗಳಿಗೆ ಇಲ್ಲಿನ ಕಾರ್ಯಕ್ಷೇತ್ರ ಮತ್ತು ಕಾರ್ಯಕ್ಷಮತೆ ಬಗ್ಗೆ ವಿವರಿಸದ ಪ್ರಾಂಶುಪಾಲರ ಕ್ರಮಕ್ಕೆ ಶಾಸಕ ಕೋಪಗೊಂಡಿಡು ಕೈ ಮಾಡಿದ್ದಾರೆ.
ಶಾಸಕರ ದಿಢೀರ್ ಕೋಪದಿಂದ ಒಂದು ಕ್ಷಣ ಗಲಿಬಿಲಿಗೊಂಡ ಪ್ರಾಂಶುಪಾಲರು ನಗುತ್ತಲೇ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಂತರ ಶಾಸಕರು ಮತ್ತು ಅತಿಥಿಗಳು ಕೇಂದ್ರದಲ್ಲಿರುವ ಎಲ್ಲಾ ವಿಭಾಗಗಳಿಗೂ ಭೇಟಿ ನೀಡಿ ಪ್ರಾಂಶುಪಾಲರು, ಅಧ್ಯಾಪಕರದಿಂದ ವಿವರಣೆ ಪಡೆದು ತೃಪ್ತರಾಗಿ ಹೊರನಡೆದರು.
A JD(S) MLA in Karnataka slapped a college principal who was not able to provide clear answer about the ongoing development work for a computer lab. The incident, which happened on Monday, has created a huge outrage among the public.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm