ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm