ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am