ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm