ಬ್ರೇಕಿಂಗ್ ನ್ಯೂಸ್
22-06-22 01:13 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ಇದ್ದುದು ಕೇವಲ ನಾಲ್ಕೂವರೆ ಗಂಟೆ. ಆದರೆ ಇಷ್ಟಕ್ಕೇ ಮೋದಿ ಭದ್ರತೆ, ಮೂಲಸೌಕರ್ಯ, ಪ್ರಧಾನಿ ಸಾಗುವ ರಸ್ತೆ ಅಭಿವೃದ್ಧಿಗಾಗಿ ಬಿಬಿಎಂಪಿ ಬರೋಬ್ಬರಿ 23 ಕೋಟಿ ರೂಪಾಯಿ ಖರ್ಚು ಮಾಡಿದೆ.
ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಸೋಮವಾರ ಬೆಳಗ್ಗೆ 11.30 ಕ್ಕೆ ಯಲಹಂಕ ವಾಯುನೆಲೆಗೆ ಮೋದಿ ಆಗಮಿಸಿದ್ದರು. ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದರು.
ಮೋದಿ ಸಾಗುವ ರಸ್ತೆ, ಅಲ್ಲಿನ ಮೂಲ ಸೌಕರ್ಯ, ಇನ್ನಿತರ ಭದ್ರತಾ ವ್ಯವಸ್ಥೆಗಾಗಿ ಬಿಬಿಎಂಪಿ ಖರ್ಚು ನಿಭಾಯಿಸಿದೆ. ಅಂದಾಜು ಪ್ರಕಾರ, ಪ್ರತಿ ನಿಮಿಷಕ್ಕೆ 5,18,518 ರೂಪಾಯಿ ಖರ್ಚು ಮಾಡಿದೆ. ಅದರಂತೆ, ಪ್ರತಿ ಗಂಟೆಗೆ 3.11 ಕೋಟಿ ರೂ. ಖರ್ಚು ಮಾಡಲಾಗಿದ್ದು ನಾಲ್ಕೂವರೆ ಗಂಟೆಯ ಕಾರ್ಯಕ್ರಮ, ಇನ್ನಿತರ ಕೆಲಸಕ್ಕಾಗಿ ಒಟ್ಟು 14 ಕೋಟಿ ವ್ಯಯ ಮಾಡಲಾಗಿದ್ಯಂತೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ರವೀಂದ್ರ ಮಾಹಿತಿ ನೀಡಿದ್ದು ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ 14 ಕಿಮೀ ರಸ್ತೆಯನ್ನು ಡಾಮರೀಕರಣ ಸೇರಿದಂತೆ ರೀ ಡೆವಲಪ್ ಮಾಡಲಾಗಿದೆ. ಬಳ್ಳಾರಿ ರಸ್ತೆ, ಬೆಂಗಳೂರು ಯುನಿವರ್ಸಿಟಿ ರಸ್ತೆ, ಕೊಮ್ಮಘಟ್ಟ ರಸ್ತೆ ಸೇರಿ 15 ದಿನಗಳಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಪಡಿಸಲಾಗಿದ್ದು ಇದಕ್ಕಾಗಿ 23 ಕೋಟಿ ರೂಪಾಯಿ ಮೊತ್ತವನ್ನು ತುರ್ತು ನಿಧಿಯಿಂದ ವ್ಯಯಿಸಲಾಗಿದೆ ಎಂದು ಹೇಳಿದರು.
ಮೋದಿ ಬೆಂಗಳೂರಿನಲ್ಲಿ ರೈಲು ಯೋಜನೆ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 28 ಸಾವಿರ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿತ್ತು. ಐಐಎಸ್ಸಿಯಲ್ಲಿ ಮಿದುಳು ಸಂಶೋಧನಾಲಯ ಉದ್ಘಾಟಿಸಿದ್ದರು. ಆ ಕಡೆ ಈ ಕಡೆ ಹತ್ತು ಕಿಮೀ ಪ್ರಯಾಣಿಸಿದ್ದರು. ಪ್ರಧಾನಿ ಆಗಮನ ಸಂದರ್ಭದಲ್ಲಿ ರಸ್ತೆ ಹದಗೆಟ್ಟ ಸ್ಥಿತಿಯಲ್ಲಿರಬಾರದು ಎನ್ನುವ ಕಾರಣಕ್ಕೆ ಆ ಭಾಗದಲ್ಲಿ ತುರ್ತಾಗಿ ಕಾಮಗಾರಿ ನಿರ್ವಹಿಸಲಾಗಿತ್ತು.
Heavy showers have always made Bengaluru roads difficult to manoeuvre, for both vehicle users and pedestrians. This is especially true as people complain of the threat of potholes, open drains and manholes inundated with water which have led to fatalities in the past.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm