ಬ್ರೇಕಿಂಗ್ ನ್ಯೂಸ್
23-06-22 02:02 pm HK News Desk ಕರ್ನಾಟಕ
ಬೆಳಗಾವಿ, ಜೂನ್ 23: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಸಾಕು ನಾಯಿಯ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬರೋಬ್ಬರಿ 5000 ಮಂದಿಗೆ ಊಟ ಹಾಕಿಸಿ ಪ್ರೀತಿ ಮರೆದಿದ್ದು ಚಾರ್ಲಿ ಸಿನಿಮಾ ಹಿನ್ನೆಲೆಯಲ್ಲಿ ಸುದ್ದಿಗೆ ಗ್ರಾಸವಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿಯಲ್ಲಿ ಈ ಪ್ರಸಂಗ ನಡೆದಿದೆ. ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ 20 ವರ್ಷಗಳಿಂದ ಸದಸ್ಯರಾಗಿರುವ ಶಿವಪ್ಪ ಮರ್ದಿ ಎಂಬವರು, ತಮ್ಮ ಸಾಕು ನಾಯಿ 'ಕ್ರಿಶ್' ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ನಾಯಿಯ ಜನ್ಮದಿನಕ್ಕೆ 1 ಕ್ವಿಂಟಲ್ ತೂಕದ ಕೇಕ್ ಕತ್ತರಿಸಿದ್ದಲ್ಲದೇ ಗ್ರಾಮದ 5 ಸಾವಿರ ಮಂದಿಗೆ ಊಟ ಹಾಕಿಸಿದ್ದಾರೆ. 3 ಕ್ವಿಂಟಾಲ್ ಚಿಕನ್, 1 ಕ್ವಿಂಟಾಲ್ ಮೊಟ್ಟೆ, ಸಸ್ಯಾಹಾರಿಗಳಿಗೆ 50 ಕೆಜಿ ಕಾಜೂ ಕರಿ ಊಟ ಹಾಕಿಸಿದ್ದಾರೆ. ಕೇಕ್ ಕತ್ತರಿಸಿದ ನಂತರ ನಾಯಿಗೆ ಗ್ರಾಮದಲ್ಲಿ ವಾದ್ಯಗಳ ಮೂಲಕ ಅದ್ಧೂರಿಯಾಗಿ ಮೆರವಣಿಗೆಯನ್ನು ಸಹ ಮಾಡಿಸಲಾಗಿದೆ. ಈ ವೇಳೆ ಊರಿನ ಜನರೆಲ್ಲ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.
ನಾಯಿ ಮಾಲೀಕ ಶಿವಪ್ಪ ಮರ್ದಿ ಕಳೆದ 20 ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ. ಈ ವೇಳೆ ನೂತನ ಸದಸ್ಯರೊಬ್ಬರು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಹಳೆ ಸದಸ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹಿಂದಿನ ಸದಸ್ಯರು ನಾಯಿಯಂತೆ ತಿಂದು ಹೋಗಿದ್ದಾರೆಂದು ಅವಮಾನ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಅವರಿಗೆ ಪ್ರತ್ಯುತ್ತರ ಕೊಡುವ ಸಲುವಾಗಿ ಶಿವಪ್ಪ ಮರ್ದಿ ನಾಯಿಯ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿದ್ದಲ್ಲದೇ ಐದು ಸಾವಿರ ಜನರಿಗೆ ಬಾಡೂಟದ ವ್ಯವಸ್ಥೆ ಮಾಡಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
A man threw an extravagant #birthdayparty for his #petdog by cutting a 100 kg cake and feeding 4000 people with veg & non veg food in Mudalagi taluk #Belagavi #Karnataka. Later, Shivappa Mardi along with his dog Krish went on a procession with a music band. pic.twitter.com/NPX1M5iKk8
— Imran Khan (@KeypadGuerilla) June 23, 2022
A man threw an extravagant birthday party for his petdog by cutting a 100 kg cake and feeding 5000 people with veg & non veg food in Mudalagi taluk Belagavi Karnataka. Later, Shivappa Mardi along with his dog Krish went on a procession with a music band.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm