ಬ್ರೇಕಿಂಗ್ ನ್ಯೂಸ್
23-06-22 05:09 pm HK News Desk ಕರ್ನಾಟಕ
ಹಾಸನ, ಜೂನ್ 23: ಹಾಸನ, ಕೊಡಗು ಭಾಗದಲ್ಲಿ ಗುರುವಾರ ನಸುಕಿನ ಜಾವ ಭೂಕಂಪನ ಸಂಭವಿಸಿದೆ. ಜನರು ಮಲಗಿದ್ದ ಸಂದರ್ಭದಲ್ಲಿಯೇ ಭೂಮಿ ನಡುಗಿದ ಅನುಭವ ಆಗಿದ್ದು, ಬೆಚ್ಚಿಬಿದ್ದು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಎರಡು-ಮೂರು ಸೆಕೆಂಡ್ ಕಾಲ ಕಂಪಿಸಿದ ಅನುಭವ ಆಗಿತ್ತು.
ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ಇತ್ತು ಎಂದು ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದ ಕೇಂದ್ರ ಬಿಂದು ಹೊಳೆನರಸೀಪುರ ತಾಲೂಕಿನ ಮಾಲುಗೇನಹಳ್ಳಿಯಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನ ಗಾಬರಿಗೊಂಡಿದ್ದಾರೆ. ಅರಕಲಗೂಡು ಪಟ್ಟಣ, ಮುದ್ದೇನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆನರಸೀಪುರ ತಾಲೂಕಿನ ಚಟ್ನಳ್ಳಿ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಜನರಿಗೆ ಕಂಪನ ಸ್ಪಷ್ಟವಾಗಿ ಅರಿವಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಈ ರೀತಿಯ ಕಂಪನದಿಂದ ಯಾವುದೇ ಹಾನಿ ಆಗುವುದಿಲ್ಲ. ಕಂಪನದ ಕೇಂದ್ರ ಬಿಂದು ಸೀಸ್ಮಿಕ್ ವಲಯ-1ರಲ್ಲಿ ಬರುತ್ತಿದ್ದು, ಭೂಕಂಪನದ ಸಾಧ್ಯತೆ ಕಡಿಮೆ ಇರುತ್ತದೆ. ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಕಂಪನಕ್ಕೂ ಮೊದಲು ಅರಕಲಗೂಡು ಪ್ರದೇಶದ ಜನರಿಗೆ ದೊಡ್ಡ ಸದ್ದು ಕೇಳಿಬಂದಿದ್ದು, ಅದರ ಬೆನ್ನಲ್ಲೇ ಕಂಪನ ಆಗಿದ್ದು ಗಾಬರಿಗೆ ಕಾರಣವಾಗಿತ್ತು.
ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಸುಂಟಿಕೊಪ್ಪ ಪ್ರದೇಶದಲ್ಲೂ ಬೆಳಗಿನ ಜಾವ 4.30ರ ಸುಮಾರಿಗೆ ಕಂಪನದ ಅನುಭವ ಆಗಿದೆ. ಸೋಮವಾರ ಪೇಟೆ ಪಟ್ಟಣದ ರೇಂಜರ್ ಬ್ಲಾಕ್, ನೇಗಳ್ಳೆ ವ್ಯಾಪ್ತಿಯ ಜನರಿಗೆ ಕಂಪನ ಅರಿವಿಗೆ ಬಂದಿದೆ. ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಅನುಭವ ಆಗಿತ್ತು. ಸುಂಟಿಕೊಪ್ಪದ ಕಾನ್ ಬೈಲು, ನಾಕೂರು ಗ್ರಾಮಸ್ಥರಿಗೆ ಭೂಕಂಪನ ಆಗಿರುವುದು ಅನುಭವಕ್ಕೆ ಬಂದಿದೆ.
An earthquake measuring 3.4 on the Richter scale shook parts of Hassan district and neighbouring regions in Karnataka in the wee hours of Thursday, a disaster management official said. The earthquake was also felt in many villages near Somwarpet in Kodagu district. People ran out of their houses following the tremor.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm