ಬ್ರೇಕಿಂಗ್ ನ್ಯೂಸ್
23-06-22 05:09 pm HK News Desk ಕರ್ನಾಟಕ
ಹಾಸನ, ಜೂನ್ 23: ಹಾಸನ, ಕೊಡಗು ಭಾಗದಲ್ಲಿ ಗುರುವಾರ ನಸುಕಿನ ಜಾವ ಭೂಕಂಪನ ಸಂಭವಿಸಿದೆ. ಜನರು ಮಲಗಿದ್ದ ಸಂದರ್ಭದಲ್ಲಿಯೇ ಭೂಮಿ ನಡುಗಿದ ಅನುಭವ ಆಗಿದ್ದು, ಬೆಚ್ಚಿಬಿದ್ದು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಎರಡು-ಮೂರು ಸೆಕೆಂಡ್ ಕಾಲ ಕಂಪಿಸಿದ ಅನುಭವ ಆಗಿತ್ತು.
ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ಇತ್ತು ಎಂದು ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದ ಕೇಂದ್ರ ಬಿಂದು ಹೊಳೆನರಸೀಪುರ ತಾಲೂಕಿನ ಮಾಲುಗೇನಹಳ್ಳಿಯಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನ ಗಾಬರಿಗೊಂಡಿದ್ದಾರೆ. ಅರಕಲಗೂಡು ಪಟ್ಟಣ, ಮುದ್ದೇನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆನರಸೀಪುರ ತಾಲೂಕಿನ ಚಟ್ನಳ್ಳಿ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಜನರಿಗೆ ಕಂಪನ ಸ್ಪಷ್ಟವಾಗಿ ಅರಿವಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಈ ರೀತಿಯ ಕಂಪನದಿಂದ ಯಾವುದೇ ಹಾನಿ ಆಗುವುದಿಲ್ಲ. ಕಂಪನದ ಕೇಂದ್ರ ಬಿಂದು ಸೀಸ್ಮಿಕ್ ವಲಯ-1ರಲ್ಲಿ ಬರುತ್ತಿದ್ದು, ಭೂಕಂಪನದ ಸಾಧ್ಯತೆ ಕಡಿಮೆ ಇರುತ್ತದೆ. ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಕಂಪನಕ್ಕೂ ಮೊದಲು ಅರಕಲಗೂಡು ಪ್ರದೇಶದ ಜನರಿಗೆ ದೊಡ್ಡ ಸದ್ದು ಕೇಳಿಬಂದಿದ್ದು, ಅದರ ಬೆನ್ನಲ್ಲೇ ಕಂಪನ ಆಗಿದ್ದು ಗಾಬರಿಗೆ ಕಾರಣವಾಗಿತ್ತು.
ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಸುಂಟಿಕೊಪ್ಪ ಪ್ರದೇಶದಲ್ಲೂ ಬೆಳಗಿನ ಜಾವ 4.30ರ ಸುಮಾರಿಗೆ ಕಂಪನದ ಅನುಭವ ಆಗಿದೆ. ಸೋಮವಾರ ಪೇಟೆ ಪಟ್ಟಣದ ರೇಂಜರ್ ಬ್ಲಾಕ್, ನೇಗಳ್ಳೆ ವ್ಯಾಪ್ತಿಯ ಜನರಿಗೆ ಕಂಪನ ಅರಿವಿಗೆ ಬಂದಿದೆ. ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಅನುಭವ ಆಗಿತ್ತು. ಸುಂಟಿಕೊಪ್ಪದ ಕಾನ್ ಬೈಲು, ನಾಕೂರು ಗ್ರಾಮಸ್ಥರಿಗೆ ಭೂಕಂಪನ ಆಗಿರುವುದು ಅನುಭವಕ್ಕೆ ಬಂದಿದೆ.
An earthquake measuring 3.4 on the Richter scale shook parts of Hassan district and neighbouring regions in Karnataka in the wee hours of Thursday, a disaster management official said. The earthquake was also felt in many villages near Somwarpet in Kodagu district. People ran out of their houses following the tremor.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm