ಬ್ರೇಕಿಂಗ್ ನ್ಯೂಸ್
23-06-22 05:09 pm HK News Desk ಕರ್ನಾಟಕ
ಹಾಸನ, ಜೂನ್ 23: ಹಾಸನ, ಕೊಡಗು ಭಾಗದಲ್ಲಿ ಗುರುವಾರ ನಸುಕಿನ ಜಾವ ಭೂಕಂಪನ ಸಂಭವಿಸಿದೆ. ಜನರು ಮಲಗಿದ್ದ ಸಂದರ್ಭದಲ್ಲಿಯೇ ಭೂಮಿ ನಡುಗಿದ ಅನುಭವ ಆಗಿದ್ದು, ಬೆಚ್ಚಿಬಿದ್ದು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಎರಡು-ಮೂರು ಸೆಕೆಂಡ್ ಕಾಲ ಕಂಪಿಸಿದ ಅನುಭವ ಆಗಿತ್ತು.
ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ಇತ್ತು ಎಂದು ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದ ಕೇಂದ್ರ ಬಿಂದು ಹೊಳೆನರಸೀಪುರ ತಾಲೂಕಿನ ಮಾಲುಗೇನಹಳ್ಳಿಯಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನ ಗಾಬರಿಗೊಂಡಿದ್ದಾರೆ. ಅರಕಲಗೂಡು ಪಟ್ಟಣ, ಮುದ್ದೇನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆನರಸೀಪುರ ತಾಲೂಕಿನ ಚಟ್ನಳ್ಳಿ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಜನರಿಗೆ ಕಂಪನ ಸ್ಪಷ್ಟವಾಗಿ ಅರಿವಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಈ ರೀತಿಯ ಕಂಪನದಿಂದ ಯಾವುದೇ ಹಾನಿ ಆಗುವುದಿಲ್ಲ. ಕಂಪನದ ಕೇಂದ್ರ ಬಿಂದು ಸೀಸ್ಮಿಕ್ ವಲಯ-1ರಲ್ಲಿ ಬರುತ್ತಿದ್ದು, ಭೂಕಂಪನದ ಸಾಧ್ಯತೆ ಕಡಿಮೆ ಇರುತ್ತದೆ. ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಕಂಪನಕ್ಕೂ ಮೊದಲು ಅರಕಲಗೂಡು ಪ್ರದೇಶದ ಜನರಿಗೆ ದೊಡ್ಡ ಸದ್ದು ಕೇಳಿಬಂದಿದ್ದು, ಅದರ ಬೆನ್ನಲ್ಲೇ ಕಂಪನ ಆಗಿದ್ದು ಗಾಬರಿಗೆ ಕಾರಣವಾಗಿತ್ತು.
ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಸುಂಟಿಕೊಪ್ಪ ಪ್ರದೇಶದಲ್ಲೂ ಬೆಳಗಿನ ಜಾವ 4.30ರ ಸುಮಾರಿಗೆ ಕಂಪನದ ಅನುಭವ ಆಗಿದೆ. ಸೋಮವಾರ ಪೇಟೆ ಪಟ್ಟಣದ ರೇಂಜರ್ ಬ್ಲಾಕ್, ನೇಗಳ್ಳೆ ವ್ಯಾಪ್ತಿಯ ಜನರಿಗೆ ಕಂಪನ ಅರಿವಿಗೆ ಬಂದಿದೆ. ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಅನುಭವ ಆಗಿತ್ತು. ಸುಂಟಿಕೊಪ್ಪದ ಕಾನ್ ಬೈಲು, ನಾಕೂರು ಗ್ರಾಮಸ್ಥರಿಗೆ ಭೂಕಂಪನ ಆಗಿರುವುದು ಅನುಭವಕ್ಕೆ ಬಂದಿದೆ.
An earthquake measuring 3.4 on the Richter scale shook parts of Hassan district and neighbouring regions in Karnataka in the wee hours of Thursday, a disaster management official said. The earthquake was also felt in many villages near Somwarpet in Kodagu district. People ran out of their houses following the tremor.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm