ಬ್ರೇಕಿಂಗ್ ನ್ಯೂಸ್
26-06-22 03:02 pm HK News Desk ಕರ್ನಾಟಕ
ಬೆಳಗಾವಿ, ಜೂನ್ 26 : ಚಾಲಕನ ನಿಯಂತ್ರಣ ತಪ್ಪಿ ಕೂಲಿ ಕಾರ್ಮಿಕರನ್ನು ಒಯ್ಯುತ್ತಿದ್ದ ಕ್ರೂಸರ್ ವಾಹನ ಕಣಬರಗಿ ಬಳಿ ಪಲ್ಟಿಯಾಗಿ ಬಿದ್ದಿದ್ದು ಸ್ಥಳದಲ್ಲೇ ಏಳು ಜನ ದುರಂತ ಸಾವು ಕಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಬೆಳಗಾವಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಅಡಿವೆಪ್ಪ ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22), ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಮೃತರು ಎಂದು ಪೊಲೀಸರು ಗುರುತಿಸಿದ್ದು ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಗೋಕಾಕ್ ತಾಲೂಕಿನ ಅಕ್ಕ ತಂಗಿಯರ ಹಾಳದಿಂದ 18 ಕಾರ್ಮಿಕರನ್ನು ಹೊತ್ತು ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.


ದುರಂತ ಪ್ರಕರಣದ ಬಗ್ಗೆ ಬೆಳಗಾವಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಅಪಘಾತ ಆಗಿದ್ದು ಅತ್ಯಂತ ದುಃಖದ ಸಂಗತಿ. ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ತಲಾ 2 ಲಕ್ಷ ಪರಿಹಾರ ನೀಡಲಿದ್ದು ಗಾಯಾಳುಗಳ ಚಿಕಿತ್ಸಾ ವೆಚ್ಚ ಸಂಪೂರ್ಣ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.


ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳದಿಂದ ಬೆಳಗ್ಗೆ 7.30 ರ ಸುಮಾರಿಗೆ ಸುಮಾರು 18 ಮಂದಿ ಕಾರ್ಮಿಕರು ಬೆಳಗಾವಿಗೆ ಹೊರಟಿದ್ದರು. ದಿನವೂ ಗುತ್ತಿಗೆ ಕಾರ್ಮಿಕರು ಇದೇ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಕ್ರೂಸರ್ ವಾಹನ ಬೆಳಗಾವಿ - ಗೋಕಾಕ್ ಮುಖ್ಯ ರಸ್ತೆಯ ಕಣಬರಗಿ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಳ್ಳಾರಿ ನಾಲಾಕ್ಕೆ ಉರುಳಿ ಬಿದ್ದಿದೆ. ಅಪಘಾತದಿಂದ ಸ್ಥಳದಲ್ಲಿಯೇ ಏಳು ಮಂದಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.


ಮೃತಪಟ್ಟವರೆಲ್ಲರೂ ಕೂಡ ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯವೂ ಕ್ರೂಸರ್ ಮೂಲಕ ಒಟ್ಟು 18 ಮಂದಿ ಬೆಳಗಾವಿಗೆ ಪ್ರಯಾಣಿಸುತ್ತಿದ್ದರು. ಕ್ರೂಸರ್ ಚಾಲಕ ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಮೂರರಿಂದ ನಾಲ್ಕು ಬಾರಿ ಪಲ್ಟಿಯಾಗಿದ್ದು, ಕ್ರೂಸರ್ ಸಂಪೂರ್ಣವಾಗಿ ಜಖಂ ಆಗಿದೆ.
Seven labourers were killed and 10 others injured when a multi-utility vehicle (MUV) overturned in Kanabaragi village near Belagavi on Sunday. The injured were admitted to a hospital in Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm