ಬ್ರೇಕಿಂಗ್ ನ್ಯೂಸ್
26-06-22 03:02 pm HK News Desk ಕರ್ನಾಟಕ
ಬೆಳಗಾವಿ, ಜೂನ್ 26 : ಚಾಲಕನ ನಿಯಂತ್ರಣ ತಪ್ಪಿ ಕೂಲಿ ಕಾರ್ಮಿಕರನ್ನು ಒಯ್ಯುತ್ತಿದ್ದ ಕ್ರೂಸರ್ ವಾಹನ ಕಣಬರಗಿ ಬಳಿ ಪಲ್ಟಿಯಾಗಿ ಬಿದ್ದಿದ್ದು ಸ್ಥಳದಲ್ಲೇ ಏಳು ಜನ ದುರಂತ ಸಾವು ಕಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಬೆಳಗಾವಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಅಡಿವೆಪ್ಪ ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22), ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಮೃತರು ಎಂದು ಪೊಲೀಸರು ಗುರುತಿಸಿದ್ದು ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಗೋಕಾಕ್ ತಾಲೂಕಿನ ಅಕ್ಕ ತಂಗಿಯರ ಹಾಳದಿಂದ 18 ಕಾರ್ಮಿಕರನ್ನು ಹೊತ್ತು ಬೆಳಗಾವಿ ನಗರಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ದುರಂತ ಪ್ರಕರಣದ ಬಗ್ಗೆ ಬೆಳಗಾವಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಅಪಘಾತ ಆಗಿದ್ದು ಅತ್ಯಂತ ದುಃಖದ ಸಂಗತಿ. ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ತಲಾ 2 ಲಕ್ಷ ಪರಿಹಾರ ನೀಡಲಿದ್ದು ಗಾಯಾಳುಗಳ ಚಿಕಿತ್ಸಾ ವೆಚ್ಚ ಸಂಪೂರ್ಣ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳದಿಂದ ಬೆಳಗ್ಗೆ 7.30 ರ ಸುಮಾರಿಗೆ ಸುಮಾರು 18 ಮಂದಿ ಕಾರ್ಮಿಕರು ಬೆಳಗಾವಿಗೆ ಹೊರಟಿದ್ದರು. ದಿನವೂ ಗುತ್ತಿಗೆ ಕಾರ್ಮಿಕರು ಇದೇ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಕ್ರೂಸರ್ ವಾಹನ ಬೆಳಗಾವಿ - ಗೋಕಾಕ್ ಮುಖ್ಯ ರಸ್ತೆಯ ಕಣಬರಗಿ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಳ್ಳಾರಿ ನಾಲಾಕ್ಕೆ ಉರುಳಿ ಬಿದ್ದಿದೆ. ಅಪಘಾತದಿಂದ ಸ್ಥಳದಲ್ಲಿಯೇ ಏಳು ಮಂದಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಮೃತಪಟ್ಟವರೆಲ್ಲರೂ ಕೂಡ ರೈಲ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯವೂ ಕ್ರೂಸರ್ ಮೂಲಕ ಒಟ್ಟು 18 ಮಂದಿ ಬೆಳಗಾವಿಗೆ ಪ್ರಯಾಣಿಸುತ್ತಿದ್ದರು. ಕ್ರೂಸರ್ ಚಾಲಕ ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಮೂರರಿಂದ ನಾಲ್ಕು ಬಾರಿ ಪಲ್ಟಿಯಾಗಿದ್ದು, ಕ್ರೂಸರ್ ಸಂಪೂರ್ಣವಾಗಿ ಜಖಂ ಆಗಿದೆ.
Seven labourers were killed and 10 others injured when a multi-utility vehicle (MUV) overturned in Kanabaragi village near Belagavi on Sunday. The injured were admitted to a hospital in Belagavi.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm