ಬ್ರೇಕಿಂಗ್ ನ್ಯೂಸ್
28-06-22 04:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.
Karnataka Over 1 lakh electric vehicles registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm