ಬ್ರೇಕಿಂಗ್ ನ್ಯೂಸ್
30-06-22 02:12 pm HK News Desk ಕರ್ನಾಟಕ
ಬೆಂಗಳೂರು, ಜೂ 30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಬಗ್ಗೆ ಹೈಕೋರ್ಟ್ ಹಲವು ದಿನಗಳಿಂದ ಅಧಿಕಾರಿಗಳಿಗೆ ಚಾಟಿ ಬೀಸುತ್ತಲೇ ಇದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಹಾಜರಾಗಿದ್ದಾರೆ.
‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಪಿಎಂ ಬಂದಾಗ ಮಾಡಿದ ರಸ್ತೆಗಳು ಹಾಳಾಗಿರುವ ವರದಿಗಳಿವೆ’ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದೆ.

ಹೈಕೋರ್ಟ್ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತರ ಪರ ವಕೀಲರಾದ ಶ್ರೀನಿಧಿ, ಪ್ರಧಾನಿ ಭೇಟಿ ವೇಳೆ ನಿರ್ಮಿಸಿದ್ದ ರಸ್ತೆಗಳು ಹಾಳಾಗಿಲ್ಲ. ಒಳಚರಂಡಿ ಸಮಸ್ಯೆಯಿಂದ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲಾಗಿದೆ. ಜಂಟಿ ಸಮೀಕ್ಷೆಯ ಪ್ರಕಾರ, 847.56 ಕಿಮೀ ರಸ್ತೆಯಲ್ಲಿರುವ ಗುಂಡಿಗಳನ್ನು ಸರಿಪಡಿಸಬೇಕಿದೆ. ಈ ಪೈಕಿ 576 ಕಿಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ. 397 ಕಿಮೀ ರಸ್ತೆ ಗುಂಡಿ ರಿಪೇರಿಗೆ ಕಾರ್ಯಾದೇಶ ನೀಡಲಾಗಿದೆ. ಜುಲೈ 15ರಂದು ಟೆಂಡರ್ ತೆರೆಯಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ರಸ್ತೆಗಳು ಸರಿಯಾಗುವವರೆಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಗಿಸುವುದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದರು.
Castigating officers of the Bruhat Bangalore Mahanagara Palike (BBMP) for delay in finalising contract to fill potholes based on mutually agreed rate, the High Court of Karnataka on Tuesday they would face a “harsh order” from the court if the issue is not settled by Thursday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am