ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm