ಬ್ರೇಕಿಂಗ್ ನ್ಯೂಸ್
04-07-22 09:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳ ತಂಡ ಸೋಮವಾರ ಬಂಧಿಸಿದೆ.
ಬಂಧನದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯುತ್ತದೆ. ಅದರ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಐದು ಲಕ್ಷ ರೂ. ಲಂಚ ಕೇಳಿದ್ದ ಆರೋಪದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ನಾಲ್ಕು ದಿನಗಳ ಹಿಂದಷ್ಟೇ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿತ್ತು. ಎಸಿಬಿ ಡಿವೈಎಸ್ಪಿ ಕೆ. ರವಿಶಂಕರ್ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರದಲ್ಲಿ ಅಧಿಕಾರಿಯನ್ನು ಬಂಧಿಸಿದೆ.

ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು ಬೇಗೂರು ನಿವಾಸಿ ಅಜಂ ಪಾಷಾ ಎಂಬವರಿಂದ ₹ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಮೇ 21 ರಂದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಹಾಗೂ ಮಹೇಶ್ ಜತೆಗಿನ ಸಂಭಾಷಣೆಯ ವಿವರವನ್ನು ಮೊಬೈಲ್ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದ ಆಜಂ ಪಾಷಾ ಎಸಿಬಿ ತನಿಖಾ ಸಂಸ್ಥೆಗೆ ದೂರು ನೀಡಿದ್ದರು.

ಲಂಚದ ಹಣವನ್ನು ಮಹೇಶ್ ಮತ್ತು ಚೇತನ್ ಕುಮಾರ್ ಪಡೆದಿದ್ದರೂ, ದೂರುದಾರರಿಗೆ ಸಂಬಂಧಿಸಿದ ಕಡತ ಜಿಲ್ಲಾಧಿಕಾರಿ ಬಳಿ ಇರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ. ಎಸಿಬಿ ಅಧಿಕಾರಿಗಳು ಜೂನ್ 22 ಮತ್ತು 30ರಂದು ಇಡೀ ದಿನ ಅಧಿಕಾರಿಯ ವಿಚಾರಣೆ ನಡೆಸಿದ್ದರು. ಇದೀಗ ಖಚಿತ ಸಾಕ್ಷ್ಯಗಳ ಆಧಾರದಲ್ಲಿ ಅಧಿಕಾರಿಯನ್ನು ಬಂಧಿಸಿದೆ.
The Anti Corruption Bureau (ACB) officials arrested J Manjunath, former Deputy Commissioner of Bengaluru Urban, in a case of bribery. The officials arrested him on Monday on the charges of demanding a bribe from a land owner recently.Manjunath is a promoted IAS officer. Following the allegations against him and the High Court's observation of the ongoing investigation of ACB officials, the state government had transferred Manjunath from DC Urban and posted him as Director of Integrated Child Protection Scheme.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm