ಬ್ರೇಕಿಂಗ್ ನ್ಯೂಸ್
04-07-22 09:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳ ತಂಡ ಸೋಮವಾರ ಬಂಧಿಸಿದೆ.
ಬಂಧನದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯುತ್ತದೆ. ಅದರ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಐದು ಲಕ್ಷ ರೂ. ಲಂಚ ಕೇಳಿದ್ದ ಆರೋಪದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ನಾಲ್ಕು ದಿನಗಳ ಹಿಂದಷ್ಟೇ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿತ್ತು. ಎಸಿಬಿ ಡಿವೈಎಸ್ಪಿ ಕೆ. ರವಿಶಂಕರ್ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರದಲ್ಲಿ ಅಧಿಕಾರಿಯನ್ನು ಬಂಧಿಸಿದೆ.

ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು ಬೇಗೂರು ನಿವಾಸಿ ಅಜಂ ಪಾಷಾ ಎಂಬವರಿಂದ ₹ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಮೇ 21 ರಂದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಹಾಗೂ ಮಹೇಶ್ ಜತೆಗಿನ ಸಂಭಾಷಣೆಯ ವಿವರವನ್ನು ಮೊಬೈಲ್ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದ ಆಜಂ ಪಾಷಾ ಎಸಿಬಿ ತನಿಖಾ ಸಂಸ್ಥೆಗೆ ದೂರು ನೀಡಿದ್ದರು.

ಲಂಚದ ಹಣವನ್ನು ಮಹೇಶ್ ಮತ್ತು ಚೇತನ್ ಕುಮಾರ್ ಪಡೆದಿದ್ದರೂ, ದೂರುದಾರರಿಗೆ ಸಂಬಂಧಿಸಿದ ಕಡತ ಜಿಲ್ಲಾಧಿಕಾರಿ ಬಳಿ ಇರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ. ಎಸಿಬಿ ಅಧಿಕಾರಿಗಳು ಜೂನ್ 22 ಮತ್ತು 30ರಂದು ಇಡೀ ದಿನ ಅಧಿಕಾರಿಯ ವಿಚಾರಣೆ ನಡೆಸಿದ್ದರು. ಇದೀಗ ಖಚಿತ ಸಾಕ್ಷ್ಯಗಳ ಆಧಾರದಲ್ಲಿ ಅಧಿಕಾರಿಯನ್ನು ಬಂಧಿಸಿದೆ.
The Anti Corruption Bureau (ACB) officials arrested J Manjunath, former Deputy Commissioner of Bengaluru Urban, in a case of bribery. The officials arrested him on Monday on the charges of demanding a bribe from a land owner recently.Manjunath is a promoted IAS officer. Following the allegations against him and the High Court's observation of the ongoing investigation of ACB officials, the state government had transferred Manjunath from DC Urban and posted him as Director of Integrated Child Protection Scheme.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm