ಬ್ರೇಕಿಂಗ್ ನ್ಯೂಸ್
05-07-22 09:32 am Hk Desk, Bengaluru ಕರ್ನಾಟಕ
ಬೆಂಗಳೂರು, ಜುಲೈ 5: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ಕೊಟ್ಟಿದೆ. ಜಮೀರ್ ಅಹಮ್ಮದ್ ಸೇರಿದ ಮನೆ, ಕಚೇರಿ ಸೇರಿ ಐದು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಂಬೂ ಬಜಾರ್ ಬಳಿಯ ಜಮೀರ್ ಮನೆ, ಸದಾಶಿವನಗರ ಸಿಲ್ವರ್ ಓಕ್ ಅಪಾರ್ಟ್ಮೆಂಟ್, ಚಾಮರಾಜಪೇಟೆ ನ್ಯಾಷನಲ್ ಟ್ರಾವೆಲ್ಸ್ ಹಾಗೂ ಬನಶಂಕರಿಯ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎಸಿಬಿ ಎಸ್ಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ದಾಳಿ ನಡೆದಿದ್ದು ಜಮೀರ್ ಕಂಟೋನ್ಮೆಂಟ್ ನಿವಾಸದ ಬಳಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಕಳೆದ ಬಾರಿ ಇಡಿ ದಾಳಿ ವೇಳೆ ಜಮೀರ್ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಈ ಬಾರಿ ಸ್ಥಳದಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಜನಪ್ರತಿನಿಧಿಗಳು ಪ್ರತೀ ವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಕೆ ಮಾಡಬೇಕೆಂಬ ನಿಯಮ ಇದೆ. ಜಮೀರ್ ತನ್ನ ಮನೆ ಮೇಲೆ ಇಡಿ ದಾಳಿ ನಡೆದಾಗ ಆಸ್ತಿ ವಿವರದ ದಾಖಲೆ ನೀಡಿದ್ದರು. ಆದ್ರೆ ಜಾರಿ ನಿರ್ದೇಶನಾಲಯಕ್ಕೂ, ಲೋಕಾಯುಕ್ತಕ್ಕೂ ನೀಡಿದ ಆಸ್ತಿ ವಿವರ ಬೇರೆ ಬೇರೆ ಇತ್ತು ಎನ್ನಲಾಗಿದೆ. ಆಸ್ತಿಯಲ್ಲಿ ವ್ಯತ್ಯಾಸ ಇದೆ ಎಂದು ಎಸಿಬಿಯಿಂದ ದಾಳಿ ನಡೆಸಿರುವ ಬಗ್ಗೆ ಮಾಹಿತಿಯಿದೆ. ಎಸಿಬಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮನೆಗೆ ದಾಳಿ ನಡೆಸಲಾಗಿದೆ.
ಎಸಿಬಿ ರಚನೆ ಬಳಿಕ ಸಣ್ಣ ಪುಟ್ಟ ಅಧಿಕಾರಿಗಳನ್ನಷ್ಟೆ ಬೇಟೆಯಾಡಲಾಗಿತ್ತು. ಐಎಎಸ್, ಐಪಿಎಸ್, ಎಂಎಲ್ ಗಳನ್ನಂತೂ ಮುಟ್ಟಿಯೇ ಇರಲಿಲ್ಲ. ಇದೀಗ ಎಂ ಎಲ್ ಎ ಜಮೀರ್ ಮನೆ ಮೇಲೆ ದಾಳಿ ಮಾಡುವ ಮೂಲಕ ಎಸಿಬಿ ಹೊಸತಾಗಿ ಬಿಸಿ ಮುಟ್ಟಿಸಿದೆ.
ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ ಅಂತ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಇತ್ತೀಚೆಗೆ ಛೀಮಾರಿ ಹಾಕಿದ್ದರು. ಇದರಿಂದ ಪರೋಕ್ಷವಾಗಿ ಬಿಜೆಪಿ ಸರಕಾರಕ್ಕೆ ಮುಖಕ್ಕೆ ಹೊಡೆದಂತಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರಕಾರ ಬೆನ್ನು ಬೆನ್ನಿಗೆ ರೇಡ್ ಮಾಡಿ ಅಧಿಕಾರಿಗಳನ್ನು ಕೆಡವಲು ಮುಂದಾಗಿದೆ. ನಿನ್ನೆ ಸಿಐಡಿ ಅಧಿಕಾರಿಗಳು ಐ ಎ ಎಸ್ ಅಧಿಕಾರಿಯನ್ನು ಬಂಧಿಸಿದ್ದರು. ಇಂದು ಎಸಿಬಿ ಅಧಿಕಾರಿಗಳು ಎಂ ಎಲ್ ಎ ಮನೆ ಮೇಲೆ ದಾಳಿ ಮಾಡಿದ್ದಾರೆ. ಈಮೂಲಕ ಬೀಸೋ ದೊಣ್ಣೆಯಿಂದ ಪಾರಾಗುವ ಯತ್ನಕ್ಕೆ ರಾಜ್ಯ ಸರಕಾರ ಮುಂದಾಗಿದೆ.
In fresh trouble for Chamarajpet MLA and Congress leader BZ Zameer Ahmed Khan, the Anti-Corruption Bureau (ACB) on Tuesday raided several of his properties in connection with a disproportionate assets case. A team of 40 officials are conducting simultaneous raids in at least five locations in Bengaluru. The raids are underway at a guesthouse in Sadashivanagar, a flat in Silver Oak apartment, a building housing GK Associates office in Banashankari, National Travels office Kalasipalya and his residence in Bengaluru Cantonment according to the ACB.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 09:33 pm
HK News Desk
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm