ಬ್ರೇಕಿಂಗ್ ನ್ಯೂಸ್
05-07-22 10:27 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 5: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರನ್ನು ಪತ್ತೆ ಮಾಡಲು ಕೊನೆಗೆ ಜೆಸಿಬಿ ಕೂಡ ನೆರವಿಗೆ ಬಂದಿತ್ತು ಅನ್ನೋ ವಿಚಾರ ಬಯಲಾಗಿದೆ. ಬೆಳಗಾವಿ ಪೊಲೀಸರು ಜೆಸಿಬಿ ಅಡ್ಡ ಇಟ್ಟು ಹಂತಕರನ್ನು ಕಾಲರ್ ಹಿಡಿದು ನಡುಬೀದಿಯಲ್ಲಿ ದರ ದರನೆ ಎಳೆ ತರುವ ವಿಡಿಯೋ ವೈರಲ್ ಆಗಿದೆ.
ಕೊಲೆ ವಿಷಯ ತಿಳಿಯುತ್ತಲೇ ಹಂತಕರ ಪತ್ತೆಗೆ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಪೊಲೀಸರು ಅಲರ್ಟ್ ಆಗಿದ್ದರು. ಹಂತಕರು ನಗರ ದಾಟಿ ಹೋಗಬಾರದು ಎಂದು ಎಲ್ಲ ಕಡೆ ನಾಕಾಬಂದಿ ಹಾಕಿದ್ದರು. ಆದರೆ, ಆರೋಪಿಗಳು ಯಾರೆಂದು ತಿಳಿಯುತ್ತಲೇ ಲೊಕೇಶನ್ ನೋಡಿದಾಗ, ನಗರ ಬಿಟ್ಟು ಹೋಗಿದ್ದು ಕನ್ಫರ್ಮ್ ಆಗಿತ್ತು. ಕಾರಿನಲ್ಲಿ ಹುಬ್ಬಳ್ಳಿ ನಗರ ದಾಟಿ ಬೆಳಗಾವಿ ರಸ್ತೆಯಲ್ಲಿ ಎಸ್ಕೇಪ್ ಆಗುತ್ತಿರುವುದು ಕಂಡುಬಂದಿತ್ತು.


ಆರೋಪಿಗಳು ಬೆಳಗಾವಿ ರಸ್ತೆಯಲ್ಲಿ ಗೋವಾ ಅಥವಾ ಮಹಾರಾಷ್ಟ್ರಕ್ಕೆ ತೆರಳುವುದು ಖಾತ್ರಿಯಾಗಿತ್ತು. ಕೂಡಲೇ ಹುಬ್ಬಳ್ಳಿ ಪೊಲೀಸರ ತಂಡ ರಾಮದುರ್ಗ ಪೊಲೀಸರಿಗೆ ಸುದ್ದಿ ಮುಟ್ಟಿಸಿತ್ತು. ಕಾರಿನಲ್ಲಿ ಆರೋಪಿಗಳು ತೆರಳುತ್ತಿರುವ ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಹೆದ್ದಾರಿಯ ಅಡ್ಡಲಾಗಿ ಜೆಸಿಬಿಯನ್ನೇ ಅಡ್ಡಕ್ಕಿಟ್ಟು ವಾಹನ ಸಂಚಾರವನ್ನು ತಡೆದು ಬಿಟ್ಟಿದ್ದರು. ಪೊಲೀಸರು ಅಡ್ಡಹಾಕಿದ್ದು ತಿಳಿಯುತ್ತಲೇ ಕಾರನ್ನು ರಿವರ್ಸ್ ತೆಗೆದು ಪರಾರಿಯಾಗಲು ಯತ್ನ ನಡೆದಿತ್ತು. ಆದರೆ ಪಿಸ್ತೂಲ್ ಹಿಡಿದೇ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಕಾರನ್ನು ಕೂಡಲೇ ಸುತ್ತುವರಿದರು. ಅದರಲ್ಲಿದ್ದ ಇಬ್ಬರನ್ನೂ ಕಾಲರ್ ಪಟ್ಟಿ ಹಿಡಿದು ಹೊರಕ್ಕೆಳೆದು ರಸ್ತೆಯಲ್ಲೇ ಎಳ್ಕೊಂಡು ಹೋಗಿ ಜೀಪಿಗೆ ಹತ್ತಿಸಿದ್ದಾರೆ.

ರಾಮದುರ್ಗ ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಐ.ಆರ್.ಪಟ್ಟಣಶೆಟ್ಟಿ, ಪಿಎಸ್ಐ ಶಿವಾನಂದ ಕಾರಜೋಳ ನೇತೃತ್ವದಲ್ಲಿ 22ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಲ್ಲದೆ, ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಜೆಸಿಬಿಯನ್ನಿಟ್ಟು ಅಡ್ಡಹಾಕಿದ್ದು ಕಾರ್ಯವೈಖರಿಗೆ ಸಾಕ್ಷಿಯಾಗಿತ್ತು. ಅಲ್ಲದೆ, ಇದರ ವಿಡಿಯೋ ಕೂಡ ವೈರಲ್ ಆಗಿದೆ.
ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ, ಗ್ರಾಹಕರ ಸೋಗಿನಲ್ಲಿ ಬಂದು ಹೊಟೇಲಿನಲ್ಲೇ ಕೃತ್ಯ
Police use JCB to block Chandrashekhar Guruji murder accused near Belgaum highway as they were trying to flee towards Maharashtra. A Vastu exponent from Karnataka who goes by the name Chandrashekhar Guruji has been stabbed to death in full public view by two men at a private hotel in the Hubballi district. Special teams were formed to catch the killers and both have now been arrested.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm