ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm