ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am