ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm