ಬ್ರೇಕಿಂಗ್ ನ್ಯೂಸ್
03-08-20 09:30 am Bangalore Correspondent ಕರ್ನಾಟಕ
ಬೆಂಗಳೂರು (ಆ. 3): ವೈದ್ಯಕೀಯ ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವಿಡಿಯೋ ಸಂದೇಶ ರವಾನಿಸಿರುವ ಸಿಎಂ ಯಡಿಯೂರಪ್ಪ, ವೈದ್ಯರು ತಪಾಸಣೆ ಮಾಡಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿರುವ ಎಲ್ಲರಿಗೂ ಧನ್ಯವಾದ. ರಾಜ್ಯದ ಜನರೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಸುರಕ್ಷತೆಯ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡಿದ್ದಾರೆ.
ನಿನ್ನೆ ರಾತ್ರಿ 8ರಿಂದ 9 ಗಂಟೆಗೆ ನನಗೆ ಕೊರೋನಾ ಪಾಸಿಟಿವ್ ಇದು ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ರಾತ್ರಿಯಿಂದ ಪರೀಕ್ಷೆ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ತಮ್ಮ ಆರೋಗ್ಯದ ಬಗ್ಗೆ ತಾವೇ ಸ್ವತಃ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
— CM of Karnataka (@CMofKarnataka) August 3, 2020
ಜನತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.@BSYBJP pic.twitter.com/6MWKswinNU
ಈಗಾಗಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm