ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm